April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್. ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್.  ಆಯ್ಕೆಯಾಗಿರುತ್ತಾನೆ.

ಇವರು ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ. ಇತ್ತೀಚೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ಮಿನಿ ಒಲಿಂಪಿಕ್ಸ್ – 2025 ರ ಕಬಡ್ಡಿ ವಿಭಾಗದ ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ದಕ್ಷಿಣ ಕನ್ನಡ ತಂಡದ ನಾಯಕನಾಗಿ ಭಾಗವಹಿಸಿರುತ್ತಾನೆ.

ಇವನು ಬಂಟ್ವಾಳ ತಾಲೂಕಿನ ನಾರ್ಶ ಮೈದಾನ ಪ್ರೌಢಶಾಲಾ ಮುಖ್ಯಶಿಕ್ಷಕರಾದ ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಸುರಿಬೈಲು ಪ್ರೌಢಶಾಲಾ ಶಿಕ್ಷಕಿ ಸ್ವಪ್ನ ಇವರ ಪುತ್ರನಾಗಿರುತ್ತಾನೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page