August 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್. ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್.  ಆಯ್ಕೆಯಾಗಿರುತ್ತಾನೆ.

ಇವರು ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ. ಇತ್ತೀಚೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ಮಿನಿ ಒಲಿಂಪಿಕ್ಸ್ – 2025 ರ ಕಬಡ್ಡಿ ವಿಭಾಗದ ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ದಕ್ಷಿಣ ಕನ್ನಡ ತಂಡದ ನಾಯಕನಾಗಿ ಭಾಗವಹಿಸಿರುತ್ತಾನೆ.

ಇವನು ಬಂಟ್ವಾಳ ತಾಲೂಕಿನ ನಾರ್ಶ ಮೈದಾನ ಪ್ರೌಢಶಾಲಾ ಮುಖ್ಯಶಿಕ್ಷಕರಾದ ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಸುರಿಬೈಲು ಪ್ರೌಢಶಾಲಾ ಶಿಕ್ಷಕಿ ಸ್ವಪ್ನ ಇವರ ಪುತ್ರನಾಗಿರುತ್ತಾನೆ.

You may also like

News

CODP Extends Education Aid to Students, Spreads Awareness on Government Welfare Schemes

The Canara Organisation for Development and Peace (CODP) organised an Education Aid Cheque Distribution Programme along with an awareness session
News

ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜ ಹತ್ಯೆ – ಕೆಲವೇ ಗಂಟೆಗಳಲ್ಲಿ ಉಡುಪಿ ಪೊಲೀಸರಿಂದ ಆರೋಪಿ ರಾಜು ಬಂಧನ

ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ

You cannot copy content of this page