April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ನಲ್ಲಿ ಪ್ರಕೃತಿಯಲ್ಲಿ ಒಂದು ದಿನ ಆಚರಣೆ

ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್ ಪಾಲನಾ ಸಮಿತಿ ಮತ್ತು ಚರ್ಚ್ ನ ಕ್ರೈಸ್ತ ಶಿಕ್ಷಣ ಬೋಧಿಸುವ ಶಿಕ್ಷಕ-ಶಿಕ್ಷಕಿಯರು ಜಂಟಿಯಾಗಿ ‘ಪ್ರಕೃತಿಯಲ್ಲಿ ಒಂದು ದಿನ’ ಆಚರಣೆಯ ಅಂಗವಾಗಿ ಹೊನ್ನಾವರ ಶರಾವತಿ ನದಿ ಕಿನಾರೆಯಲ್ಲಿರುವ ಹೋಲಿ ಕ್ರಾಸ್‌ ಬ್ರದರ್ಸ್ ಸಂಸ್ಥೆಯ ಆವರಣಕ್ಕೆ ಭೇಟಿ ನೀಡಿ ಪ್ರಕೃತಿ ಸೌಂದರ್ಯವನ್ನು ಸವಿದರು.

ಪಾಲ್ದನೆ ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊರವರು ಪ್ರಾರ್ಥನೆಯೊಂದಿಗೆ ಈ ಪ್ರವಾಸಕ್ಕೆ ಚಾಲನೆ ನೀಡಿದರು. ಪ್ರಕೃತಿ ಮಾನವನಿಗೆ ದೇವರು ನೀಡಿದ ಒಂದು ವರ. ದಿನವಿಡೀ ಈ ಪ್ರಕೃತಿ ಮಾನವನಿಗೆ ಜೀವನದ ಒಂದು ಅಂಗವಾಗಿರುತ್ತದೆ. ಪಾಲನಾ ಸಮಿತಿಯವರ ಈ ಪ್ರವಾಸ ಮುಂದೆ ಅವರು ಸಲ್ಲಿಸುವ ಸೇವೆಗೆ ಒಗ್ಗಟ್ಟಿನ ಮಂತ್ರವಾಗುತ್ತದೆ ಎಂದವರು ಹೇಳಿದರು.

ಈ ಸಂದಭರ್ದಲ್ಲಿ ಡೀಕನ್ ರೋವಿನ್ ಲೋಪೆಜ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಯೋಜಕಿ ಲಿಝಿ ಫೆರ್ನಾಂಡಿಸ್, ಆಧ್ಯಾತ್ಮಿಕ ಸಮಿತಿಯ ಸಂಯೋಜಕಿ ಪ್ರೆಸಿಲ್ಲಾ ಫೆರ್ನಾಂಡಿಸ್, ವಾರ್ಡ್ ಮುಖ್ಯಸ್ಥರು, ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಧರ್ಮ ಭಗಿನಿಯರು ಉಪಸ್ಥಿತರಿದ್ದರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page