April 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಚರ್ಚ್ ನಲ್ಲಿ ಪ್ರಕೃತಿಯಲ್ಲಿ ಒಂದು ದಿನ ಆಚರಣೆ

ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್ ಪಾಲನಾ ಸಮಿತಿ ಮತ್ತು ಚರ್ಚ್ ನ ಕ್ರೈಸ್ತ ಶಿಕ್ಷಣ ಬೋಧಿಸುವ ಶಿಕ್ಷಕ-ಶಿಕ್ಷಕಿಯರು ಜಂಟಿಯಾಗಿ ‘ಪ್ರಕೃತಿಯಲ್ಲಿ ಒಂದು ದಿನ’ ಆಚರಣೆಯ ಅಂಗವಾಗಿ ಹೊನ್ನಾವರ ಶರಾವತಿ ನದಿ ಕಿನಾರೆಯಲ್ಲಿರುವ ಹೋಲಿ ಕ್ರಾಸ್‌ ಬ್ರದರ್ಸ್ ಸಂಸ್ಥೆಯ ಆವರಣಕ್ಕೆ ಭೇಟಿ ನೀಡಿ ಪ್ರಕೃತಿ ಸೌಂದರ್ಯವನ್ನು ಸವಿದರು.

ಪಾಲ್ದನೆ ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊರವರು ಪ್ರಾರ್ಥನೆಯೊಂದಿಗೆ ಈ ಪ್ರವಾಸಕ್ಕೆ ಚಾಲನೆ ನೀಡಿದರು. ಪ್ರಕೃತಿ ಮಾನವನಿಗೆ ದೇವರು ನೀಡಿದ ಒಂದು ವರ. ದಿನವಿಡೀ ಈ ಪ್ರಕೃತಿ ಮಾನವನಿಗೆ ಜೀವನದ ಒಂದು ಅಂಗವಾಗಿರುತ್ತದೆ. ಪಾಲನಾ ಸಮಿತಿಯವರ ಈ ಪ್ರವಾಸ ಮುಂದೆ ಅವರು ಸಲ್ಲಿಸುವ ಸೇವೆಗೆ ಒಗ್ಗಟ್ಟಿನ ಮಂತ್ರವಾಗುತ್ತದೆ ಎಂದವರು ಹೇಳಿದರು.

ಈ ಸಂದಭರ್ದಲ್ಲಿ ಡೀಕನ್ ರೋವಿನ್ ಲೋಪೆಜ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಯೋಜಕಿ ಲಿಝಿ ಫೆರ್ನಾಂಡಿಸ್, ಆಧ್ಯಾತ್ಮಿಕ ಸಮಿತಿಯ ಸಂಯೋಜಕಿ ಪ್ರೆಸಿಲ್ಲಾ ಫೆರ್ನಾಂಡಿಸ್, ವಾರ್ಡ್ ಮುಖ್ಯಸ್ಥರು, ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಧರ್ಮ ಭಗಿನಿಯರು ಉಪಸ್ಥಿತರಿದ್ದರು.

You may also like

News

MCC ಬ್ಯಾಂಕ್ ಅಭೂತಪೂರ್ವ ಪ್ರಗತಿ – ₹13 ಕೋಟಿ ಲಾಭ ದಾಖಲೆ

ಶೀಘ್ರದಲ್ಲೇ 25 ಶಾಖೆಗಳ ಗುರಿ – ಅಧ್ಯಕ್ಷ ಅನಿಲ್ ಲೋಬೊ ಕರಾವಳಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ MCC ಬ್ಯಾಂಕ್ (ಮಂಗಳೂರು ಕ್ಯಾಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್), 2025-26ನೇ
News

ವಿಶ್ವ ಆರೋಗ್ಯ ದಿನ – ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಿಂದ ರಿಯಾಯಿತಿ ದರದಲ್ಲಿ ‘ಹೆಲ್ತ್ ಕಾರ್ಡ್’ ಘೋಷಣೆ

ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ನಗರದ ಖ್ಯಾತ ಇಂಡಿಯಾನಾ ಆಸ್ಪತ್ರೆಯು ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ವಿಶೇಷ ‘ಆರೋಗ್ಯ ಕಾರ್ಡ್’ ಯೋಜನೆಗಳನ್ನು ಅನಾವರಣಗೊಳಿಸಿದೆ.

You cannot copy content of this page