August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಸೂಚಿಸಲಾಗಿದೆ. ಸೂಕ್ಷ್ಮ ಪುದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು ಕರ್ತವ್ಯದಲ್ಲಿ ನಿಯೋಜಿಸಿ ನಿಗಾವಹಿಸಲಾಗುತ್ತಿದೆ. ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪುವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ, ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾವಹಿಸಲಾಗುತ್ತಿದೆ.

ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸ್ ಇಲಾಖೆ ವಿನಂತಿಸಿದೆ.

You may also like

News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.

You cannot copy content of this page