ಸತೀಶ್ ಬಂಗೇರ ಕಾಶಿಪಟ್ಣರವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ
ಸಹಕಾರಿ ಕ್ಷೇತ್ರದಲ್ಲಿ ಕಳೆದ 25ವರ್ಷಗಳಿಂದ ಸಲ್ಲಿಸಿರುವ ಅಮೂಲ್ಯ ಸೇವೆಗಾಗಿ ಬೆಳ್ತಂಗಡಿ ತಾಲೂಕಿನ ಹಿರಿಯ ಸಹಕಾರಿ ಮುಖಂಡ ಸತೀಶ್ ಬಂಗೇರ ಕಾಶಿಪಟ್ಣರವರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಸತೀಶ್ ಬಂಗೇರ ಕಾಶಿಪಟ್ಣರವರು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಬೆಳ್ತಂಗಡಿ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರೂ ಆಗಿದ್ದು ಸಂಘವನ್ನು ಮುನ್ನಡೆಸುತ್ತಿದ್ದಾರೆ.

ನವೆಂಬರ್ 14ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಲಿದ್ದಾರೆ.





