April 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕ ನಿಧನ

ನಾಳೆ ಸರ್ಕಾರಿ ರಜೆ ಇಲ್ಲ – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಖ್ಯಾತ ಪರಿಸರ ಹೋರಾಟಗಾರ್ತಿ, ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕ ಸರ್ಕಾರದ ಮಾನ್ಯ ಪರಿಸರ ರಾಯಭಾರಿ ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕರವರು ಇಂದು ನವೆಂಬರ್ 14ರಂದು ಶುಕ್ರವಾರ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಸರ್ಕಾರ ತನ್ಮಯ ಸಂತಾಪ ಸೂಚಿಸಿದೆ.

ಸರ್ಕಾರದ ಅಧಿಸೂಚನೆ ಪ್ರಕಾರ, ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಆದರೆ ರಾಜ್ಯದಲ್ಲಿ ನಾಳೆ ನವೆಂಬರ್ 15ರಂದು ಶನಿವಾರ ಯಾವುದೇ ಸರ್ಕಾರಿ ರಜೆ ಘೋಷಿಸಲಾಗಿಲ್ಲ.

ಇನ್ನೊಂದೆಡೆ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರ ಕುರಿತಾಗಿ ಹೊರಬಿದ್ದಿದ್ದ ‘ಮರಣ ಆದೇಶವನ್ನು ಯಾರೋ ಕಿಡಿಗೇಡಿಗಳು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾರೆ. ಆ ಆದೇಶಕ್ಕೆ ಸಹಿ ಮಾಡಿದ ಅಧಿಕಾರಿ ಪ್ರಸ್ತುತ ಆ ಇಲಾಖೆಯಲ್ಲಿ ಸೇವೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ, ಸರ್ಕಾರದ ಅಧೀನ ಕಾರ್ಯದರ್ಶಿ-1 (ಪ್ರ) ಬಾಣದರಂಗಯ್ಯ ಎನ್.ಆರ್. ರವರ ಸಹಿ ಸಹಿತ ಅಧಿಸೂಚನೆ ಇಂದು ಹೊರಡಿಸಲಾಗಿದೆ.

You may also like

News

MCC ಬ್ಯಾಂಕ್ ಅಭೂತಪೂರ್ವ ಪ್ರಗತಿ – ₹13 ಕೋಟಿ ಲಾಭ ದಾಖಲೆ

ಶೀಘ್ರದಲ್ಲೇ 25 ಶಾಖೆಗಳ ಗುರಿ – ಅಧ್ಯಕ್ಷ ಅನಿಲ್ ಲೋಬೊ ಕರಾವಳಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ MCC ಬ್ಯಾಂಕ್ (ಮಂಗಳೂರು ಕ್ಯಾಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್), 2025-26ನೇ
News

ವಿಶ್ವ ಆರೋಗ್ಯ ದಿನ – ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಿಂದ ರಿಯಾಯಿತಿ ದರದಲ್ಲಿ ‘ಹೆಲ್ತ್ ಕಾರ್ಡ್’ ಘೋಷಣೆ

ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ನಗರದ ಖ್ಯಾತ ಇಂಡಿಯಾನಾ ಆಸ್ಪತ್ರೆಯು ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ವಿಶೇಷ ‘ಆರೋಗ್ಯ ಕಾರ್ಡ್’ ಯೋಜನೆಗಳನ್ನು ಅನಾವರಣಗೊಳಿಸಿದೆ.

You cannot copy content of this page