December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕ ನಿಧನ

ನಾಳೆ ಸರ್ಕಾರಿ ರಜೆ ಇಲ್ಲ – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಖ್ಯಾತ ಪರಿಸರ ಹೋರಾಟಗಾರ್ತಿ, ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕ ಸರ್ಕಾರದ ಮಾನ್ಯ ಪರಿಸರ ರಾಯಭಾರಿ ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕರವರು ಇಂದು ನವೆಂಬರ್ 14ರಂದು ಶುಕ್ರವಾರ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಸರ್ಕಾರ ತನ್ಮಯ ಸಂತಾಪ ಸೂಚಿಸಿದೆ.

ಸರ್ಕಾರದ ಅಧಿಸೂಚನೆ ಪ್ರಕಾರ, ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಆದರೆ ರಾಜ್ಯದಲ್ಲಿ ನಾಳೆ ನವೆಂಬರ್ 15ರಂದು ಶನಿವಾರ ಯಾವುದೇ ಸರ್ಕಾರಿ ರಜೆ ಘೋಷಿಸಲಾಗಿಲ್ಲ.

ಇನ್ನೊಂದೆಡೆ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರ ಕುರಿತಾಗಿ ಹೊರಬಿದ್ದಿದ್ದ ‘ಮರಣ ಆದೇಶವನ್ನು ಯಾರೋ ಕಿಡಿಗೇಡಿಗಳು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾರೆ. ಆ ಆದೇಶಕ್ಕೆ ಸಹಿ ಮಾಡಿದ ಅಧಿಕಾರಿ ಪ್ರಸ್ತುತ ಆ ಇಲಾಖೆಯಲ್ಲಿ ಸೇವೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ, ಸರ್ಕಾರದ ಅಧೀನ ಕಾರ್ಯದರ್ಶಿ-1 (ಪ್ರ) ಬಾಣದರಂಗಯ್ಯ ಎನ್.ಆರ್. ರವರ ಸಹಿ ಸಹಿತ ಅಧಿಸೂಚನೆ ಇಂದು ಹೊರಡಿಸಲಾಗಿದೆ.

You may also like

News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ
News

ಲೋಕಸಭೆಯಲ್ಲಿ ಮಾಜಿ ಸೈನಿಕರ ಪರ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಯೋಧರ ಚಿಕಿತ್ಸಾ ತೊಂದರೆ ಗಂಭೀರ – ಖಾಸಗಿ ಆಸ್ಪತ್ರೆಗಳು ಹಿಂದೆ ಸರಿಯುತ್ತಿರುವುದೇ ಆತಂಕ ಕೊಡಗಿನಲ್ಲಿ ECHS ಆಸ್ಪತ್ರೆಗಳ ಕೊರತೆ – ನಿವೃತ್ತ ಯೋಧರು 100–150 ಕಿ.ಮೀ ಪ್ರಯಾಣಿಸುವ

You cannot copy content of this page