May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕ ನಿಧನ

ನಾಳೆ ಸರ್ಕಾರಿ ರಜೆ ಇಲ್ಲ – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಖ್ಯಾತ ಪರಿಸರ ಹೋರಾಟಗಾರ್ತಿ, ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕ ಸರ್ಕಾರದ ಮಾನ್ಯ ಪರಿಸರ ರಾಯಭಾರಿ ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕರವರು ಇಂದು ನವೆಂಬರ್ 14ರಂದು ಶುಕ್ರವಾರ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಸರ್ಕಾರ ತನ್ಮಯ ಸಂತಾಪ ಸೂಚಿಸಿದೆ.

ಸರ್ಕಾರದ ಅಧಿಸೂಚನೆ ಪ್ರಕಾರ, ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಆದರೆ ರಾಜ್ಯದಲ್ಲಿ ನಾಳೆ ನವೆಂಬರ್ 15ರಂದು ಶನಿವಾರ ಯಾವುದೇ ಸರ್ಕಾರಿ ರಜೆ ಘೋಷಿಸಲಾಗಿಲ್ಲ.

ಇನ್ನೊಂದೆಡೆ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರ ಕುರಿತಾಗಿ ಹೊರಬಿದ್ದಿದ್ದ ‘ಮರಣ ಆದೇಶವನ್ನು ಯಾರೋ ಕಿಡಿಗೇಡಿಗಳು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾರೆ. ಆ ಆದೇಶಕ್ಕೆ ಸಹಿ ಮಾಡಿದ ಅಧಿಕಾರಿ ಪ್ರಸ್ತುತ ಆ ಇಲಾಖೆಯಲ್ಲಿ ಸೇವೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ, ಸರ್ಕಾರದ ಅಧೀನ ಕಾರ್ಯದರ್ಶಿ-1 (ಪ್ರ) ಬಾಣದರಂಗಯ್ಯ ಎನ್.ಆರ್. ರವರ ಸಹಿ ಸಹಿತ ಅಧಿಸೂಚನೆ ಇಂದು ಹೊರಡಿಸಲಾಗಿದೆ.

You may also like

News

ವಾಣಿಜ್ಯ ಸಿಲಿಂಡರ್ ದರ ಏರಿಕೆ – ಕೇಂದ್ರದ ವಿರುದ್ಧ MLC ಐವನ್ ಡಿಸೋಜ ಆಕ್ರೋಶ

ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವು ಜನವಿರೋಧಿಯಾಗಿದ್ದು, ಇದನ್ನು ವಿಧಾನ ಪರಿಷತ್ ಸದಸ್ಯರಾದ ಐವನ್
News

ನೀರುಮಾರ್ಗ ಚರ್ಚ್‌ನಲ್ಲಿ ಸಂಭ್ರಮದ ‘ಸಮುದಾಯ ದಿನಾಚರಣೆ’ – ಇಂದು ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭೋಜನ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನಲ್ಲಿ ಇಂದು ‘ಸಮುದಾಯ ದಿನಾಚರಣೆ’ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಚರ್ಚ್

You cannot copy content of this page