December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯ ಶವ ಪತ್ತೆ – ನಾಯಿ ದಾಳಿಯಿಂದ ಸಾವು ಶಂಕೆ

ಉಳ್ಳಾಲ ತಾಲ್ಲೂಕಿನ ಕುಂಪಲದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಅವರ ಮನೆಯ ಸಮೀಪ ನವೆಂಬರ್ 14ರಂದು ಶುಕ್ರವಾರ ಪತ್ತೆಯಾಗಿದೆ. ವಾಯುವಿಹಾರಕ್ಕೆ ತೆರಳಿದಾಗ ನಾಯಿ ದಾಳಿಯಿಂದ ಅವರು ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು 60 ವರ್ಷ ಪ್ರಾಯದ ದಯಾನಂದ ಗಟ್ಟಿ ಎಂದು ಗುರುತಿಸಲಾಗಿದೆ.

ದಯಾನಂದರವರು ಮುಂಜಾನೆ 3 ಗಂಟೆ ಸುಮಾರಿಗೆ ಕುಂಪಲ ಬೈಪಾಸ್‌ ಬಳಿ ವಾಯುವಿಹಾರಕ್ಕೆ ತೆರಳಿದ್ದನ್ನು ಸ್ಥಳೀಯರು ನೋಡಿದ್ದಾರೆ. ಅವರ ದೇಹನ ಮೇಲಿನ ಗಾಯದ ಗುರುತುಗಳನ್ನು ನೋಡಿದರೆ, ಅವರ ಮೇಲೆ ಪ್ರಾಣಿ ದಾಳಿ ನಡೆಸಿದ ಹಾಗಿದೆ. ಅವರು ವಾಯು ವಿಹಾರ ನಡೆಸುವಾಗ ಕೋಳಿ ಮಾಂಸದ ಮಳಿಗೆ ಬಳಿ ನಾಯಿಯೊಂದು ಇತ್ತು. ಅದರ ಬಾಯಿಯಲ್ಲಿ ರಕ್ತದ ಕಲೆಗಳಿದ್ದವು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆ ನಾಯಿಯೇ ಅವರ ಮೇಲೆ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗಾಯಗೊಂಡಿದ್ದ ದಯಾನಂದ ಗಟ್ಟಿಯವರು ಮನೆಯವರೆಗೆ ತಲುಪಿದ್ದು, ಅಂಗಳದ ಬಳಿ ಕುಸಿದು ಬಿದ್ದಿದ್ದರು. ಅವರ ಕಣ್ಣುಗುಡ್ಡೆಯೊಂದು ಹೊರಗೆ ಬಂದಿತ್ತು. ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಣಿದಾಳಿಯಿಂದ ಸಾವು ಸಂಭವಿಸುದ್ದನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪತ್ರಿಕಾ ಪ್ರಕಟನೆಯಲ್ಲಿ ಮಾಹಿತಿ ನೀಡಿದ್ದಾರೆ.

ನಾಯಿ ಮೃತದೇಹದ ಮೇಲೆ ಇದ್ದಿದ್ದನ್ನು ನಾನು ಗಮನಿಸಿದೆ ಎಂದು ಸ್ಥಳೀಯ ಹಾಲು ಮಾರಾಟದ ಅಂಗಡಿಯ ಮಾಲೀಕ ವಿನೋದ್‌ ಕುಂಪಲ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಮುಂಜಾನೆ ಅಂಗಡಿ ತೆರೆಯಲೆಂದು ಕುಂಪಲ ಬೈಪಾಸಿಗೆ ಬಂದಿದ್ದೆ. ಸ್ಥಳದಲ್ಲಿ ಏನೂ ಗಮನಕ್ಕೆ ಬಂದಿರಲಿಲ್ಲ. ಮುಖಂಡರೊಬ್ಬರು ಮೃತದೇಹ ಇರುವುದನ್ನು ಗಮನಕ್ಕೆ ತಂದಾಗ ತಕ್ಷಣಕ್ಕೆ ತೆರಳಿದೆ. ಈ ವೇಳೆ ಮೃತದೇಹದ ಬಳಿ ನಾಯಿ ಕುಳಿತಿದ್ದು, ಓಡಿಸಲು ಯತ್ನಿಸಿದರೂ ತೆರಳಲಿಲ್ಲ. ಬಳಿಕ ಹತ್ತಿರದಲ್ಲೇ ಇದ್ದ ರಿಕ್ಷಾ ತೆಗೆಯಲು ಮುಂದಾದಾಗ ನಾಯಿ ಓಡಿದೆ. ನಾಯಿಯ ಮೈ ಪೂರ್ತಿ ರಕ್ತ ಇದ್ದು ಹತ್ತಿರದ ಅಂಗಡಿ ಮುಂದೆಯೂ ರಕ್ತ ವ್ಯಕ್ತಿಯ ಕಣ್ಣು ಬಿದ್ದುಕೊಂಡಿದ್ದನ್ನು ಆಮೇಲೆ ಗಮನಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

You may also like

News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ
News

ಲೋಕಸಭೆಯಲ್ಲಿ ಮಾಜಿ ಸೈನಿಕರ ಪರ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಯೋಧರ ಚಿಕಿತ್ಸಾ ತೊಂದರೆ ಗಂಭೀರ – ಖಾಸಗಿ ಆಸ್ಪತ್ರೆಗಳು ಹಿಂದೆ ಸರಿಯುತ್ತಿರುವುದೇ ಆತಂಕ ಕೊಡಗಿನಲ್ಲಿ ECHS ಆಸ್ಪತ್ರೆಗಳ ಕೊರತೆ – ನಿವೃತ್ತ ಯೋಧರು 100–150 ಕಿ.ಮೀ ಪ್ರಯಾಣಿಸುವ

You cannot copy content of this page