ಮಂಗಳೂರಿನಲ್ಲಿ ಪೈಪ್ಲೈನ್ ಹಾನಿಯಿಂದ ನೀರು ಸರಬರಾಜಿನಲ್ಲಿ ವ್ಯತ್ಯಯ – ದುರಸ್ತಿ ಪೂರ್ಣ
ನಾಳೆ ನವೆಂಬರ್ 20ರಂದು ಗುರುವಾರ ಬೆಳಿಗ್ಗೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ

ಮಂಗಳೂರಿನ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆ ನವೆಂಬರ್ 17ರಂದು ಸೋಮವಾರ ಬೆಳಗ್ಗೆ ಪಡೀಲ್ ಸಮೀಪದ ಕಣ್ಣೂರು ಬಳಿ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು, ಕೆಲಸವನ್ನು ಇಂದು ನವೆಂಬರ್ 19ರಂದು ಬುಧವಾರ ಪೂರ್ಣಗೊಳಿಸಲಾಗಿದೆ.




ಪಾಲಿಕೆಯ ಪ್ರಕಾರ, ದುರಸ್ತಿ ಕಾರ್ಯ ಪೂರ್ಣಗೊಂಡಿರುವುದರಿಂದ ನಾಳೆ ನವೆಂಬರ್ 20ರಂದು ಗುರುವಾರ ಬೆಳಿಗ್ಗೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ.

ಈ ಸಂದರ್ಭ ಸಾರ್ವಜನಿಕರು ಸಹಕಾರ ನೀಡುವಂತೆ ಮಹಾನಗರ ಪಾಲಿಕೆ ವಿನಂತಿಸಿದೆ.




