December 11, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಿರುಕುಳದ ಬೇಸರದಿಂದ ಹರೀಶ್ ಆತ್ಮಹತ್ಯೆ – ವೆಲ್ಡರ್ ಹೇಮಂತ್ ಆಚಾರ್ಯ ವಿರುದ್ಧ ಪೊಲೀಸ್ ಕ್ರಮ, ಪ್ರಕರಣ ದಾಖಲು

ಪುತ್ತೂರಿನ ಒಂದು ಕಾಂಪ್ಲೆಕ್ಸ್‌ನಲ್ಲಿ ವಾಹನ ಪೈಟಿಂಗ್ ಕೆಲಸ ಮಾಡುತ್ತಿದ್ದ ಬಂಟ್ವಾಳ ಇಡ್ಕಿದು ನಿವಾಸಿ ಹರೀಶ್ (ಮೃತ) ಅವರಿಗೆ, ಅದೇ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಆಚಾರ್ಯ ಎಂಬಾತ ಕಳೆದ ಒಂದು ತಿಂಗಳಿನಿಂದ ವಿನಾಕಾರಣ ಬೈಯುತ್ತಾ, ಮಾನಸಿಕ ಕಿರುಕುಳ ನೀಡುತ್ತಿದ್ದಾನೆಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆ ಆರೋಪಿಯು ಹರೀಶ್ ರವರ ಮೇಲೆ ದೌರ್ಜನ್ಯ ನಡೆಸಿ, ತಲ್ವಾರ್ ಹಿಡಿದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಮೃತರ ಮಗಳು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕಿರುಕುಳದಿಂದ ಮನನೊಂದು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮಗಳು ಹೇಳಿಕೆ ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.: 112/2025, ಕಲಂ 108 BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೊದಲಿನಿಂದಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಮರಣ (UDR) ಪ್ರಕರಣವನ್ನು, ಮಗಳ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ನಗರದ ಪೊಲೀಸರಿಗೆ ಮುಂದಿನ ತನಿಖೆಗೆ ವರ್ಗಾಯಿಸಲಾಗುತ್ತಿದೆ. ತನಿಖೆ ಮುಂದುವರಿಯುತ್ತಿದೆ.

You may also like

News

ಕೋಮು ದ್ವೇಷ ಭಾಷಣ ಪ್ರಕರಣದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಜಾಮೀನು

ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಬೆಳೆಸುವ ಮತ್ತು ಅವಮಾನಕಾರಿ ಭಾಷಣ
News

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ ವೈರಲ್ – ಶಾಪ್ ಮುಂದೆ ಇಟ್ಟಿದ್ದ ಶವರ್ಮಾ ನಾಯಿಗೆ ಬಲಿ

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ಎನ್ನುವ ಶೀರ್ಷಿಕೆಯಲ್ಲಿ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಬನ್

You cannot copy content of this page