December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ನವೆಂಬರ್ 23ರಂದು ಭಾನುವಾರ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಮಹಮ್ಮದ್ ಮಿಫ್ರಾ ದಂತ ವೈದ್ಯರು, ಡಾ. ಅಪ್ಸಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನೆಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ., ವೈದ್ಯಾಧಿಕಾರಿ ಡಾ. ಶಿವಾನಂದಸ್ವಾಮಿ, ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕರಾದ ಗಾಯತ್ರಿ ಪೂಜಾರಿ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಸಿಂಧು ವಿ.ಎಂ. ಕಾರ್ಯಕ್ರಮ ನಿರೂಪಿಸಿದರು.

You may also like

News

ಮಂಗಳೂರಿನ ಆಯುಷ್ ಇಲಾಖೆಯ ಅವಧಿ ಮೀರಿದ ಔಷಧ ಅಕ್ರಮ—ಸರ್ಕಾರದ ನಿರ್ಲಕ್ಷ್ಯಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡಿದ ಗಂಭೀರ ಅಕ್ರಮದ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಶಾಸಕ ವೇದವ್ಯಾಸ ಕಾಮತ್
News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ

You cannot copy content of this page