August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯ ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ನವೆಂಬರ್ 23ರಂದು ಭಾನುವಾರ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಮಹಮ್ಮದ್ ಮಿಫ್ರಾ ದಂತ ವೈದ್ಯರು, ಡಾ. ಅಪ್ಸಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನೆಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ., ವೈದ್ಯಾಧಿಕಾರಿ ಡಾ. ಶಿವಾನಂದಸ್ವಾಮಿ, ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕರಾದ ಗಾಯತ್ರಿ ಪೂಜಾರಿ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಸಿಂಧು ವಿ.ಎಂ. ಕಾರ್ಯಕ್ರಮ ನಿರೂಪಿಸಿದರು.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page