May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಹುನಿರೀಕ್ಷಿತ ಕೊಂಕಣಿ ಚಿತ್ರ ‘ಬಾಪಾಚೆ ಪುತಾಚೆ ನಾಂವಿಂ’ ನಾಳೆ ನವೆಂಬರ್ 28ರಂದು ಮಂಗಳೂರು ಭಾರತ್ ಸಿನೆಮಾಸ್‌ನಲ್ಲಿ ಬಿಡುಗಡೆ

ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ತಯಾರಾದ ಚಲನಚಿತ್ರ

ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ಮೂಡಿಬಂದಿರುವ ಬಹುನಿರೀಕ್ಷಿತ ಕೊಂಕಣಿ ಚಿತ್ರ ‘ಬಾಪಾಚೆ ಪುತಾಚೆ ನಾಂವಿಂ’ ನಾಳೆ ನವೆಂಬರ್ 28ರಂದು ಶುಕ್ರವಾರ ಮಂಗಳೂರಿನ ಭಾರತ್ ಸಿನೆಮಾಸ್‌ನಲ್ಲಿ ತೆರೆಕಾಣಲಿದೆ.

ಈ ಚಿತ್ರವು ಈಗಾಗಲೇ ಹಲವು ಪ್ರೀಮಿಯರ್ ಪ್ರದರ್ಶನಗಳಲ್ಲಿ ಭಾಗಿಯಾಗಿ ಪ್ರೇಕ್ಷಕರಿಂದ ಹಾಗೂ ಸಿನೆಮಾ ವಿಮರ್ಶಕರಿಂದ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಯುವ ಸಾಹಿತಿ ಹಾಗೂ ಪತ್ರಕರ್ತ ಸ್ಟ್ಯಾನಿ ಬೇಳ ಈ ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದು ದಿಗ್ದರ್ಶನ ವಹಿಸಿರುವುದು ವಿಶೇಷ.

ಚಿತ್ರಕ್ಕೆ ಸಂಜಯ್ ರೊಡ್ರಿಗಸ್ ಹಿನ್ನಲೆ ಸಂಗೀತ ನೀಡಿದ್ದು, ಯುವ ಛಾಯಾಗ್ರಾಹಕ ಜೋಯಲ್ ಶಮನ್ ಕ್ಯಾಮೆರಾ ಕಾರ್ಯ ನಿರ್ವಹಿಸಿದ್ದಾರೆ. ನಿರ್ಮಾಣ ಸಂಸ್ಥೆಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಚಿತ್ರವನ್ನು ಉಡುಪಿ, ಪುತ್ತೂರು ಹಾಗೂ ದೇರಳಕಟ್ಟೆಗಳಲ್ಲಿ ಡಿಸೆಂಬರ್ 5ರಂದು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಚಿತ್ರ ಬಿಡುಗಡೆಯತ್ತ ಕೊಂಕಣಿ ಪ್ರೇಕ್ಷಕರಲ್ಲಿ ಹೆಚ್ಚಿದ ನಿರೀಕ್ಷೆ ಕಂಡುಬರುತ್ತಿದೆ.

You may also like

News

Mumbai Archbishop Cardinal Oswald Gracias Offers Solace to Residents of Saint Anthony’s Ashram

MANGALURU: His Eminence Cardinal Oswald Gracias, Archbishop of Mumbai and a member of the Pope’s Council of Cardinals, paid a
News

ಸೂರಿಕುಮೇರು – ಮಾಣಿಯಲ್ಲಿ ಅದ್ದೂರಿ ‘ಅನ್ಫಾಲ್ ರೆಸ್ಟೋರೆಂಟ್’ ಮೇ 3ರಂದು ಉದ್ಘಾಟನೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಭಾಗಿ ಉದ್ಘಾಟನಾ ಭವ್ಯ ಸಮಾರಂಭದಲ್ಲಿ ಮೂವರು ಸಾಧಕರಾದ ಚೇತನ್ ರೈ, ನಾಗರಾಜ್ ಶೆಟ್ಟಿ ಹಾಗೂ ಯಾಸೀರ್ ಕಲ್ಲಡ್ಕ

You cannot copy content of this page