ಕಬಡ್ಡಿ ವಿಶ್ವಕಪ್ ಚಾಂಪಿಯನ್ ಕುಮಾರಿ ಧನಲಕ್ಷ್ಮೀ ಪೂಜಾರಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ ಮತ್ತು ಸನ್ಮಾನ
ನಮ್ಮೂರಿನ ಹೆಮ್ಮೆಯ ಪ್ರತಿಭೆಗೆ ಅಭಿಮಾನದ ನಮನ

ಕಬಡ್ಡಿ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿರುವ, ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು ಹಾಗೂ ನಾರಾಯಣ ಪೂಜಾರಿ–ಶಶಿಕಲಾ ದಂಪತಿಯ ಮಗಳಾದ ಕುಮಾರಿ ಧನಲಕ್ಷ್ಮೀ ಪೂಜಾರಿ ಅವರನ್ನು ಇಂದು ನವೆಂಬರ್ 29ರಂದು ಶನಿವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಭವ್ಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.


ಬಿಜೆಪಿ ಮಂಗಳೂರು ಉತ್ತರ ಹಾಗೂ ದಕ್ಷಿಣ ಮಂಡಲಗಳ ವತಿಯಿಂದ ನಡೆದ ಈ ಸಂಭ್ರಮ ಸ್ವಾಗತ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್, ದಕ್ಷಿಣ ಕನ್ನಡ ಕಬಡ್ಡಿ ಒಕ್ಕೂಟದ ಪದಾಧಿಕಾರಿಗಳು, ಆಳ್ವಾಸ್ ವಿದ್ಯಾ ಸಂಸ್ಥೆಯ ವಿವೇಕ್ ಆಳ್ವ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.



ಕುಮಾರಿ ಧನಲಕ್ಷ್ಮೀ ಪೂಜಾರಿಯವರ ಸಾಧನೆಗೆ ಎಲ್ಲರೂ ಹರ್ಷ ವ್ಯಕ್ತಪಡಿಸಿ, ಅವರ ಮುಂದಿನ ಕ್ರೀಡಾ ಜೀವನವು ಉಜ್ವಲವಾಗಿರಲೆಂದು ಶುಭ ಹಾರೈಸಿದರು.




