December 11, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ

ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಿ” – ರಘು ಸಾಲಿಯಾನ್ ವಾಮಂಜೂರು

ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ 2025-26ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ನವೆಂಬರ್ 29ರಂದು ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ವಂದನೀಯ ಭಗಿನಿ ಸಿಸಿಲಿಯಾ ಮೆಂಡೊನ್ಸಾ ಬಿಎಸ್ ಇವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಮಕ್ಕಳಾ ಸಾಧನೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಾಮಂಜೂರಿನ ಸಾಮಾಜಿಕ ಮುಂದಾಳು ರಘು ಸಾಲಿಯಾನ್ ಮಕ್ಕಳಿಗೆ ಬಹುಮಾನ ನೀಡಿ, “ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.  ಸ್ಥಳೀಯ ಕಾನ್ವೆಂಟಿನ ಸುಪೀರಿಯರ್ ವಂದನೀಯ ಭಗಿನಿ ಲವಿಟ ಮೊರಾಸ್ ಬಿಎಸ್ ಬಹುಮಾನ ನೀಡಿ ಮಕ್ಕಳಿಗೆ ಅಭಿನಂದಿಸಿದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಂದನೀಯ ಭಗಿನಿ ಮನಿಶ ರೊಡ್ರಿಗಸ್ ಸ್ವಾಗತಿಸಿದರು. ವಂದನೀಯ ಭಗಿನಿ ಸುಷ್ಮಾ ಮೊಂತೇರೊ ವಂದಿಸಿದರು. ರೀಮಾ ಕುಟಿನ್ಹಾ ಕಾರ್ಯಕ್ರಮ ನಿರೂಪಿಸಿದರು.

You may also like

News

ಕೋಮು ದ್ವೇಷ ಭಾಷಣ ಪ್ರಕರಣದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಜಾಮೀನು

ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಬೆಳೆಸುವ ಮತ್ತು ಅವಮಾನಕಾರಿ ಭಾಷಣ
News

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ ವೈರಲ್ – ಶಾಪ್ ಮುಂದೆ ಇಟ್ಟಿದ್ದ ಶವರ್ಮಾ ನಾಯಿಗೆ ಬಲಿ

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ಎನ್ನುವ ಶೀರ್ಷಿಕೆಯಲ್ಲಿ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಬನ್

You cannot copy content of this page