May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ

ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಿ” – ರಘು ಸಾಲಿಯಾನ್ ವಾಮಂಜೂರು

ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ 2025-26ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ನವೆಂಬರ್ 29ರಂದು ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ವಂದನೀಯ ಭಗಿನಿ ಸಿಸಿಲಿಯಾ ಮೆಂಡೊನ್ಸಾ ಬಿಎಸ್ ಇವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಮಕ್ಕಳಾ ಸಾಧನೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಾಮಂಜೂರಿನ ಸಾಮಾಜಿಕ ಮುಂದಾಳು ರಘು ಸಾಲಿಯಾನ್ ಮಕ್ಕಳಿಗೆ ಬಹುಮಾನ ನೀಡಿ, “ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.  ಸ್ಥಳೀಯ ಕಾನ್ವೆಂಟಿನ ಸುಪೀರಿಯರ್ ವಂದನೀಯ ಭಗಿನಿ ಲವಿಟ ಮೊರಾಸ್ ಬಿಎಸ್ ಬಹುಮಾನ ನೀಡಿ ಮಕ್ಕಳಿಗೆ ಅಭಿನಂದಿಸಿದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಂದನೀಯ ಭಗಿನಿ ಮನಿಶ ರೊಡ್ರಿಗಸ್ ಸ್ವಾಗತಿಸಿದರು. ವಂದನೀಯ ಭಗಿನಿ ಸುಷ್ಮಾ ಮೊಂತೇರೊ ವಂದಿಸಿದರು. ರೀಮಾ ಕುಟಿನ್ಹಾ ಕಾರ್ಯಕ್ರಮ ನಿರೂಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page