December 10, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಮೋ ಬ್ಯಾಡ್ಮಿಂಟನ್‌ ಟೂರ್ನಿಗೆ ಚಾಲನೆ

ಫಿಟ್‌, ಯಂಗ್‌, ಆತ್ಮನಿರ್ಭರ ಭಾರತದಿಂದ ಮಾತ್ರ ವಿಕಸಿತ ಭಾರತ ನಿರ್ಮಾಣ – ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯಪೂರ್ಣ ವಿಕಸಿತ ಭಾರತದ ಪರಿಕಲ್ಪನೆಯ ಸಂಸತ್‌ ಕ್ರೀಡೋತ್ಸವದ ಭಾಗವಾಗಿ ನಿನ್ನೆ ನವೆಂಬರ್ 29ರಂದು ಶನಿವಾರ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ನಮೋ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚಿಂತನೆಯ ವಿಕಸಿತ ಭಾರತ ನಿರ್ಮಾಣವಾಗಬೇಕಾದರೆ ಮೊದಲು ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಿದೆ. ಅಂಥಹ ಆರೋಗ್ಯವಂಥ ಭಾರತ ನಿರ್ಮಾಣದ ಪ್ರಯತ್ನವೇ ಈ ಸಂಸತ್‌ ಕ್ರೀಡೋತ್ಸವದ ಪ್ರಯುಕ್ತ ಆಯೋಜಿಸಿರುವ ಈ ನಮೋ ಕ್ರೀಡಾ ಸ್ಪರ್ಧೆಗಳು. ಕಳೆದ ವಾರ ನಮೋ ಚೆಸ್‌ ಟೂರ್ನಿ ಆಯೋಜಿಸಲಾಗಿದ್ದು, ಇದೀಗ ನಮೋ ಬ್ಯಾಡ್ಮಿಂಟನ್‌ ಪಂದ್ಯಾಟಕ್ಕೆ ಚಾಲನೆ ನೀಡಲಾಗಿದೆ” ಎಂದು ಹೇಳಿದರು. ಇಂದು ನವೆಂಬರ್ 30ರಂದು ಭಾನುವಾರ ನಮೋ ವಾಲಿಬಾಲ್‌ ಟೂರ್ನಿ ಪ್ರಾರಂಭವಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಭಾರತ ದೇಶವು ಈಗ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯ ಹೆಜ್ಜೆ ಹಾಕುತ್ತಿದೆ. ಇಂಥಹ ಕಾಲಘಟ್ಟದಲ್ಲಿ ಕೇವಲ ಫಿಟ್‌ ಇಂಡಿಯಾ ಭಾರತ ಮಾತ್ರ ವಿಕಸಿತ ಭಾರತವಾಗಿ ರೂಪುಗೊಳ್ಳುವುದಕ್ಕೆ ಸಾಧ್ಯ. ಅಲ್ಲದೇ ಕೇವಲ ಒಂದು ಯಂಗ್‌ ಇಂಡಿಯಾ ಮಾತ್ರ ವಿಕಸಿತ ಭಾರತವಾಗಲಿದೆ. ಹಾಗೆಯೇ ಒಂದು ಆತ್ಮನಿರ್ಭರ ಭಾರತ ಮಾತ್ರ ವಿಕಸಿತ ಭಾರತವಾಗಿ ನಿರ್ಮಾಣವಾಗುವುದಕ್ಕೆ ಸಾಧ್ಯ. ಹೀಗಿರುವಾಗ, ನಾವೆಲ್ಲ ಪ್ರಧಾನಿಯವರ ಕನಸಿತ ಆ ವಿಕಸಿತ ಭಾರತದ ಕನಸಿನತ್ತ ಹೆಜ್ಜೆ ಹಾಕುವುದಕ್ಕೆ ಕಾರ್ಯೋನ್ಮುಖರಾಗಬೇಕೆಂದು ಕ್ಯಾಪ್ಟನ್ ಚೌಟ ಕರೆ ನೀಡಿದ್ದಾರೆ.

 

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದ ಸಂಸತ್‌ ಕ್ರೀಡೋತ್ಸವು ಯುವ ಕ್ರೀಡಾಪಟುಗಳಿಗೆ ಹೆಚ್ಚಿನ ಉತ್ತೇಜನವನ್ನು ನೀಡುತ್ತಿದೆ. ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಬಹಳ ಯಶಸ್ವಿಯಾಗಿ ಈ ಸಂಸತ್‌ ಕ್ರೀಡಾ ಮಹೋತ್ಸವನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ನಾನು ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಉದ್ಘಾಟನೆ ಬಳಿಕ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಹಾಗೂ ಶಾಸಕ ವೇದವ್ಯಾಸ ಕಾಮತ್‌ ಅವರು ಬ್ಯಾಡ್ಮಿಂಟನ್‌ ಆಟವಾಡಿ ಗಮನಸೆಳೆದರು.

You may also like

News

ಕೋಮು ದ್ವೇಷ ಭಾಷಣ ಪ್ರಕರಣದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಜಾಮೀನು

ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಬೆಳೆಸುವ ಮತ್ತು ಅವಮಾನಕಾರಿ ಭಾಷಣ
News

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ ವೈರಲ್ – ಶಾಪ್ ಮುಂದೆ ಇಟ್ಟಿದ್ದ ಶವರ್ಮಾ ನಾಯಿಗೆ ಬಲಿ

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ಎನ್ನುವ ಶೀರ್ಷಿಕೆಯಲ್ಲಿ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಬನ್

You cannot copy content of this page