August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆನ್ ಲೈನ್ ವಂಚನೆಗೆ ಕಡಿವಾಣ

ಎಲ್ಲಾ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಕ್ಕೆ ಕೇಂದ್ರ ಆದೇಶ

ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸುವಂತೆ ದೂರಸಂಪರ್ಕ ಇಲಾಖೆ ಮೊಬೈಲ್ ಕಂಪೆನಿಗಳಿಗೆ ಆದೇಶ ನೀಡಿದೆ.

ಈ ಆದೇಶದ ಪುಕಾರ, ಸ್ಮಾರ್ಟ್‌ಫೋನ್ ತಯಾರಕರು 90 ದಿನಗಳಲ್ಲಿ ಎಲ್ಲಾ ಹೊಸ ಮಾದರಿಗಳಲ್ಲಿ ಈ ಅಪ್ಲಿಕೇಶನ್ ಅನ್ನು ಫ್ರಿ ಇನ್‌ಸ್ಟಾಲ್‌ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಬಳಕೆದಾರರು ಈ ಅಪ್ಲಿಕೇಶನ್ ನನ್ನು ತಮ್ಮ ಫೋನ್‌ಗಳಿಂದ ಅನ್‌ಇನ್‌ಸ್ಟಾಲ್‌ ಮಾಡಲು ಅಥವಾ ನಿಷ್ಕ್ರಿಯಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈಗಾಗಲೇ ಬಳಕೆಯಲ್ಲಿರುವ ಮೊಬೈಲ್‌ಗಳಿಗೆ ಸಾಫ್ಟ್‌ವೇರ್ ಅಪ್‌ಡೇಟ್ ನೀಡುವಾಗ ಈ ಆಪ್ ಲಭ್ಯವಾಗುವಂತೆ ಮಾಡಬೇಕು ಎಂದು ಸೂಚಿಸಿದೆ. ಈ ನಿಯಮವು ಆ್ಯಪಲ್, ಸ್ಯಾಮ್‌ಸಂಗ್, ಗೂಗಲ್, ಶಿಯೋಮಿ, ವಿವೋ ಅಥವಾ ಯಾವುದೇ ಇತರ ಬ್ಯಾಂಡ್ ಆಗಿರಲಿ ಎಲ್ಲಾ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.

ಸಂಚಾರ್ ಸಾಥಿ ಅಪ್ಲಿಕೇಶನ್ ಪ್ರಯೋಜನಗಳೇನು?

ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಮತ್ತು ಕದ್ದ ಮೊಬೈಲ್‌ಗಳನ್ನು ಬಳಸಿಕೊಂಡು ನಡೆಸುವ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ‘ಸಂಚಾರ್‌ ಸಾಥಿ’ ಆ್ಯಪ್ ಮೂಲಕ ಇದಕ್ಕೆ ಕಡಿವಾಣ ಹಾಕಲು ಸಿದ್ಧತೆ ನಡೆಸಿದೆ. ಈ ಆ್ಯಪ್, ಕಳೆದುಹೋದ ಅಥವಾ ಕದ್ದೊಯ್ದ ಫೋನ್‌ಗಳನ್ನು ಬ್ಲಾಕ್ ಮಾಡಲು ಮತ್ತು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ, ಬಳಕೆದಾರರ ಹೆಸರಿನಲ್ಲಿರುವ ನಕಲಿ ಮೊಬೈಲ್ ಸಂಪರ್ಕಗಳನ್ನು ಗುರುತಿಸಿ, ಅವುಗಳನ್ನು ಕಡಿತಗೊಳಿಸಲು ಕೂಡ ಅವಕಾಶ ನೀಡುತ್ತದೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page