April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆನ್ ಲೈನ್ ವಂಚನೆಗೆ ಕಡಿವಾಣ

ಎಲ್ಲಾ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಕ್ಕೆ ಕೇಂದ್ರ ಆದೇಶ

ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸುವಂತೆ ದೂರಸಂಪರ್ಕ ಇಲಾಖೆ ಮೊಬೈಲ್ ಕಂಪೆನಿಗಳಿಗೆ ಆದೇಶ ನೀಡಿದೆ.

ಈ ಆದೇಶದ ಪುಕಾರ, ಸ್ಮಾರ್ಟ್‌ಫೋನ್ ತಯಾರಕರು 90 ದಿನಗಳಲ್ಲಿ ಎಲ್ಲಾ ಹೊಸ ಮಾದರಿಗಳಲ್ಲಿ ಈ ಅಪ್ಲಿಕೇಶನ್ ಅನ್ನು ಫ್ರಿ ಇನ್‌ಸ್ಟಾಲ್‌ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಬಳಕೆದಾರರು ಈ ಅಪ್ಲಿಕೇಶನ್ ನನ್ನು ತಮ್ಮ ಫೋನ್‌ಗಳಿಂದ ಅನ್‌ಇನ್‌ಸ್ಟಾಲ್‌ ಮಾಡಲು ಅಥವಾ ನಿಷ್ಕ್ರಿಯಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈಗಾಗಲೇ ಬಳಕೆಯಲ್ಲಿರುವ ಮೊಬೈಲ್‌ಗಳಿಗೆ ಸಾಫ್ಟ್‌ವೇರ್ ಅಪ್‌ಡೇಟ್ ನೀಡುವಾಗ ಈ ಆಪ್ ಲಭ್ಯವಾಗುವಂತೆ ಮಾಡಬೇಕು ಎಂದು ಸೂಚಿಸಿದೆ. ಈ ನಿಯಮವು ಆ್ಯಪಲ್, ಸ್ಯಾಮ್‌ಸಂಗ್, ಗೂಗಲ್, ಶಿಯೋಮಿ, ವಿವೋ ಅಥವಾ ಯಾವುದೇ ಇತರ ಬ್ಯಾಂಡ್ ಆಗಿರಲಿ ಎಲ್ಲಾ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.

ಸಂಚಾರ್ ಸಾಥಿ ಅಪ್ಲಿಕೇಶನ್ ಪ್ರಯೋಜನಗಳೇನು?

ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಮತ್ತು ಕದ್ದ ಮೊಬೈಲ್‌ಗಳನ್ನು ಬಳಸಿಕೊಂಡು ನಡೆಸುವ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ‘ಸಂಚಾರ್‌ ಸಾಥಿ’ ಆ್ಯಪ್ ಮೂಲಕ ಇದಕ್ಕೆ ಕಡಿವಾಣ ಹಾಕಲು ಸಿದ್ಧತೆ ನಡೆಸಿದೆ. ಈ ಆ್ಯಪ್, ಕಳೆದುಹೋದ ಅಥವಾ ಕದ್ದೊಯ್ದ ಫೋನ್‌ಗಳನ್ನು ಬ್ಲಾಕ್ ಮಾಡಲು ಮತ್ತು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ, ಬಳಕೆದಾರರ ಹೆಸರಿನಲ್ಲಿರುವ ನಕಲಿ ಮೊಬೈಲ್ ಸಂಪರ್ಕಗಳನ್ನು ಗುರುತಿಸಿ, ಅವುಗಳನ್ನು ಕಡಿತಗೊಳಿಸಲು ಕೂಡ ಅವಕಾಶ ನೀಡುತ್ತದೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page