January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಂಚನೆ ತಪ್ಪಿಸಿದ ಬ್ಯಾಂಕ್ ಮ್ಯಾನೇಜರ್ ರಾಯ್ ಸ್ಟನ್‌ರವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ರವರಿಂದ ಅಭಿನಂದನೆ  

ಕರ್ತವ್ಯನಿಷ್ಠೆಯ ಮೆರಗು – ವೃದ್ಧ ದಂಪತಿಗಳ ಹಣ ಉಳಿಸಿದ ಮ್ಯಾನೇಜರ್‌ಗೆ ಗೌರವ

ಕಿನ್ನಿಗೋಳಿ ಬಳಿಯ ದಾಮಸ್ ಕಟ್ಟೆಯ ವೃದ್ಧ ದಂಪತಿಗಳಿಂದ ವಂಚಕರು ಕಬಳಿಸಲು ಯತ್ನಿಸಿದ್ದ ರೂಪಾಯಿ 84 ಲಕ್ಷ ಮೊತ್ತವನ್ನು, ತನ್ನ ಕರ್ತವ್ಯ ನಿಷ್ಠೆ, ಸೂಕ್ಷ್ಮ ಗಮನ ಹಾಗೂ ಸಮಯೋಚಿತ ಕ್ರಮಗಳಿಂದ ಉಳಿಸಿದ್ದಕ್ಕಾಗಿ ಕಿನ್ನಿಗೋಳಿ ಕೆನರಾ ಬ್ಯಾಂಕ್ ಮ್ಯಾನೇಜರ್ ರಾಯ್ ಸ್ಟನ್ ಅವರನ್ನು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿಯಾಗಿ ಅಭಿನಂದಿಸಿದರು.

ಶಾಸಕ ಉಮಾನಾಥ್ ಕೋಟ್ಯಾನ್ ಅವರು ಮಾತನಾಡಿ, “ಸಮಾಜದ ಸಾಮಾನ್ಯ ಜನರು ಮೋಸದ ಜಾಲಕ್ಕೆ ಸಿಲುಕದಂತೆ ಬ್ಯಾಂಕ್ ಸಿಬ್ಬಂದಿ ನೀಡಬೇಕಾದ ಸೇವೆಗೆ ರಾಯ್ ಸ್ಟನ್ ಮಾದರಿಯಾಗಿದ್ದಾರೆ. ಅವರ ಜಾಗ್ರತೆ ಹಲವರಿಗೆ ಪ್ರೇರಣೆಯಾಗಿದೆ. ಇಂತಹ ಸತ್ಯ, ನಿಷ್ಠ ಮತ್ತು ಜವಾಬ್ದಾರಿಯುತ ಅಧಿಕಾರಿಗಳು ನಮ್ಮ ಸಮಾಜದ ಹೆಮ್ಮೆ” ಎಂದು ಶ್ಲಾಘಿಸಿದರು.

ಬ್ಯಾಂಕ್ ಮ್ಯಾನೇಜರ್ ರಾಯ್ ಸ್ಟನ್ ಅವರ ಸಮಯೋಚಿತ ಕೃತ್ಯದಿಂದ ವೃದ್ಧ ದಂಪತಿಗಳು ಭಾರೀ ಆರ್ಥಿಕ ನಷ್ಟದಿಂದ ಪಾರಾಗಿದ್ದು, ಸ್ಥಳೀಯ ವಲಯದಲ್ಲಿ ಈ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

You may also like

News

ಸೂರಿಕುಮೇರುವಿನ ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬ್ರಷ್ಟಾಚಾರದ ಆರೋಪ ಸಂಪೂರ್ಣ ಸುಳ್ಳು – ಹಿಂದಿನ ಆಡಳಿತ ಮಂಡಳಿಯ ಖಡಕ್ ಸ್ಪಷ್ಟನೆ

ಬ್ರಷ್ಟಾಚಾರ ನಡೆದಿದ್ದರೆ ಧರ್ಮಾಧ್ಯಕ್ಷರ ಮೌನ ಹೇಗೆ ಸಾಧ್ಯ? – ಅಪಪ್ರಚಾರಕರಿಗೆ ಭಕ್ತಾಧಿಗಳ ನೇರ ಸವಾಲು ನಿಷ್ಟಾವಂತ ಸೇವೆ ನೀಡಿದ ಹಿಂದಿನ ಧರ್ಮಗುರುಗಳ ಹೆಸರುಗಳಿಗೆ ಮಸಿ ಬಳಿಸಲು ಷಡ್ಯಂತ್ರ
News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ

You cannot copy content of this page