January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿ ಶೀರೂರು ಮಠ ಪರ್ಯಾಯ – ಡಿಸೆಂಬರ್ 16ರಂದು ಮಂಗಳೂರಿನಲ್ಲಿ ಪೂರ್ವಭಾವಿ ಸಭೆ

ಜಗದ್ಗುರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಅಷ್ಟ ಮಠಗಳ ಪೈಕಿ ಒಂದಾದ ಉಡುಪಿ ಶೀರೂರು ಮಠದ ಯತಿಗಳಾದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ದಿನಾಂಕ 18-01-2026ರಂದು ಭಾನುವಾರ ಶ್ರೀ ಕೃಷ್ಣನ ಪೂಜಾ ದೀಕ್ಷೆಯೊಂದಿಗೆ ತಮ್ಮ ಪ್ರಥಮ ಪರ್ಯಾಯ ಸರ್ವಜ್ಞ ಪೀಠಾರೋಹಣವನ್ನು ನೆರವೇರಿಸಲಿದ್ದಾರೆ.

ಈ ಮಹತ್ವದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಪೂಜ್ಯ ಶ್ರೀಪಾದರನ್ನು ಮಂಗಳೂರಿಗೆ ಭವ್ಯವಾಗಿ ಸ್ವಾಗತಿಸುವ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಲು ಡಿಸೆಂಬರ್ 16ರಂದು ಮಂಗಳವಾರ ಸಂಜೆ 5 ಗಂಟೆಗೆ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಡಾ. ಎಂ.ಬಿ. ಪುರಾಣಿಕ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಶೀರೂರು ಮಠದ ಪ್ರಮುಖರು ಭಾಗವಹಿಸಲಿದ್ದಾರೆ. ಸುಧಾಕರ ರಾವ್ ಪೇಜಾವರ, ಗುರುಪ್ರಸಾದ್ ಕಡಂಬಾರ್ ಹಾಗೂ ಬಿ. ಸುಬ್ರಹ್ಮಣ್ಯ ರಾವ್ ಉಪಸ್ಥಿತರಿರಲಿದ್ದಾರೆ.

ಶೀರೂರು ಮಠದ ಶಿಷ್ಯವೃಂದ, ಸಮಾಜಬಾಂಧವರು, ವಿವಿಧ ಸಂಘ–ಸಂಸ್ಥೆಗಳ ಪ್ರಮುಖರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಶೀರೂರು ಪರ್ಯಾಯ ಸಮಿತಿಯ ಪರವಾಗಿ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ವಿನಂತಿಸಿದ್ದಾರೆ.

ಸಂಪರ್ಕ ಸಂಖ್ಯೆ:

ಡಾ. ಎಂ.ಬಿ. ಪುರಾಣಿಕ್ – 9448143321

ಎಸ್. ಪ್ರದೀಪ ಕುಮಾರ ಕಲ್ಕೂರ – 9845083736

ಸುಧಾಕರ ರಾವ್ ಪೇಜಾವರ – 9448546051

ಬಿ. ಸುಬ್ರಹ್ಮಣ್ಯ ರಾವ್ – 9448012068

ಗುರುಪ್ರಸಾದ್ ಕಡಂಬಾರ್ – 9380999424

You may also like

News

ಸೂರಿಕುಮೇರುವಿನ ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬ್ರಷ್ಟಾಚಾರದ ಆರೋಪ ಸಂಪೂರ್ಣ ಸುಳ್ಳು – ಹಿಂದಿನ ಆಡಳಿತ ಮಂಡಳಿಯ ಖಡಕ್ ಸ್ಪಷ್ಟನೆ

ಬ್ರಷ್ಟಾಚಾರ ನಡೆದಿದ್ದರೆ ಧರ್ಮಾಧ್ಯಕ್ಷರ ಮೌನ ಹೇಗೆ ಸಾಧ್ಯ? – ಅಪಪ್ರಚಾರಕರಿಗೆ ಭಕ್ತಾಧಿಗಳ ನೇರ ಸವಾಲು ನಿಷ್ಟಾವಂತ ಸೇವೆ ನೀಡಿದ ಹಿಂದಿನ ಧರ್ಮಗುರುಗಳ ಹೆಸರುಗಳಿಗೆ ಮಸಿ ಬಳಿಸಲು ಷಡ್ಯಂತ್ರ
News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ

You cannot copy content of this page