May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ಗಾಂಜಾ ಮಾರಾಟ ಯತ್ನ – ಇಬ್ಬರ ಬಂಧನ

810 ಗ್ರಾಂ ಗಾಂಜಾ ಹಾಗೂ ಕಾರುಆಟೋ ಸ್ವಾಧೀನ

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ 13ರಂದು ಶನಿವಾರ ಸಂಜೆ, ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರದ ರಾಷ್ಟ್ರೀಯ ಹೆದ್ದಾರಿ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ. (ಕಾನೂನು ಮತ್ತು ಸುವ್ಯವಸ್ಥೆ), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು.

ಸ್ಥಳ ಪರಿಶೀಲನೆಯ ವೇಳೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ನಿರ್ಜನ ಪ್ರದೇಶದಲ್ಲಿ KA-19-MN-3664 ಸಂಖ್ಯೆಯ ಕಾರು ಹಾಗೂ KA-19-AE-0166 ಸಂಖ್ಯೆಯ ಆಟೋ ರಿಕ್ಷಾದ ಬಳಿ ಇಬ್ಬರು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿತು. ವಿಚಾರಣೆ ನಡೆಸಿದಾಗ ಆರೋಪಿಗಳು ಬಂಟ್ವಾಳ ತುಂಬೆ ನಿವಾಸಿ 31 ವರ್ಷ ಪ್ರಾಯದ ಸಮೀರ್ ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ 35 ವರ್ಷ ಪ್ರಾಯದ ಮೊಹಮ್ಮದ್ ಅಸೀಫ್ ಎಂದು ಗುರುತಿಸಲ್ಪಟ್ಟರು.

ವಿಚಾರಣೆಯಲ್ಲಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದು, ತಪಾಸಣೆಯಲ್ಲಿ ಕಾರಿನಲ್ಲಿ 450 ಗ್ರಾಂ ಹಾಗೂ ಆಟೋ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿದೆ.

ಒಟ್ಟು 810 ಗ್ರಾಂ ಗಾಂಜಾ ಹಾಗೂ ಬಳಸಿದ್ದ ವಾಹನಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 183/2025, ಕಲಂ 8(c), 20(b)(ii)(a) NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page