June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

KSRTC ಬಸ್–ಬೈಕ್ ಭೀಕರ ಅಪಘಾತ: ಎಲೆಕ್ಟ್ರಿಷಿಯನ್ ನೋಯೆಲ್ ಜೋಸೆಫ್ ಪಿಂಟೋ ಮೃತ್ಯು

KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಪುಂಜಾಲಕಟ್ಟೆ–ಪುರಿಯ ರಸ್ತೆ ಮಾರ್ಗದಲ್ಲಿ ನಡೆದಿದೆ.

ಮಡಂತ್ಯಾರು ಸಮೀಪದ ಪುಂಜಾಲಕಟ್ಟೆ ಪುರಿಯ ರಸ್ತೆಯ ನಿವಾಸಿ, ಎಲೆಕ್ಟ್ರಿಷಿಯನ್ 38 ವರ್ಷ ಪ್ರಾಯದ ನೋಯೆಲ್ ಜೋಸೆಫ್ ಪಿಂಟೋ ಮೃತ ವ್ಯಕ್ತಿ. ಅವರು ಮನೆಯಲ್ಲಿ ಕೆಲಸದವರಿಗೆ ಕಾಫಿ–ತಿಂಡಿ ತರಲು ಮಡಂತ್ಯಾರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, KSRTC ಬಸ್ ಆಟೋ ರಿಕ್ಷಾವನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ನೋಯೆಲ್ ಅವರ ಹೃದಯ ಭಾಗಕ್ಕೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನೋಯೆಲ್ ಜೋಸೆಫ್ ಪಿಂಟೋ ಅವರು ವೇಣೂರು ಮೆಸ್ಕಾಂ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

ಮೃತರು ತಾಯಿ ಫ್ಲೋರಿನ್ ಪಿಂಟೋ, ಇಬ್ಬರು ಸಹೋದರರು ಹಾಗೂ ಒಬ್ಬ ಸಹೋದರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಡಿಸೆಂಬರ್ 15ರಂದು ಸೋಮವಾರ ಸಂಜೆ 4 ಗಂಟೆಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ನಡೆಯಲಿದೆ.

You may also like

News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ

You cannot copy content of this page