August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

KSRTC ಬಸ್–ಬೈಕ್ ಭೀಕರ ಅಪಘಾತ: ಎಲೆಕ್ಟ್ರಿಷಿಯನ್ ನೋಯೆಲ್ ಜೋಸೆಫ್ ಪಿಂಟೋ ಮೃತ್ಯು

KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಪುಂಜಾಲಕಟ್ಟೆ–ಪುರಿಯ ರಸ್ತೆ ಮಾರ್ಗದಲ್ಲಿ ನಡೆದಿದೆ.

ಮಡಂತ್ಯಾರು ಸಮೀಪದ ಪುಂಜಾಲಕಟ್ಟೆ ಪುರಿಯ ರಸ್ತೆಯ ನಿವಾಸಿ, ಎಲೆಕ್ಟ್ರಿಷಿಯನ್ 38 ವರ್ಷ ಪ್ರಾಯದ ನೋಯೆಲ್ ಜೋಸೆಫ್ ಪಿಂಟೋ ಮೃತ ವ್ಯಕ್ತಿ. ಅವರು ಮನೆಯಲ್ಲಿ ಕೆಲಸದವರಿಗೆ ಕಾಫಿ–ತಿಂಡಿ ತರಲು ಮಡಂತ್ಯಾರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, KSRTC ಬಸ್ ಆಟೋ ರಿಕ್ಷಾವನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ನೋಯೆಲ್ ಅವರ ಹೃದಯ ಭಾಗಕ್ಕೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನೋಯೆಲ್ ಜೋಸೆಫ್ ಪಿಂಟೋ ಅವರು ವೇಣೂರು ಮೆಸ್ಕಾಂ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

ಮೃತರು ತಾಯಿ ಫ್ಲೋರಿನ್ ಪಿಂಟೋ, ಇಬ್ಬರು ಸಹೋದರರು ಹಾಗೂ ಒಬ್ಬ ಸಹೋದರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಡಿಸೆಂಬರ್ 15ರಂದು ಸೋಮವಾರ ಸಂಜೆ 4 ಗಂಟೆಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ನಡೆಯಲಿದೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page