August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಗೌರವ: ಬೆಳಗಾವಿ ಅಧಿವೇಶನ ಮುಂದೂಡಿ ದಾವಣಗೆರೆಗೆ ತೆರಳಿ ಅಂತಿಮ ದರ್ಶನ ಪಡೆದ ಸಭಾಧ್ಯಕ್ಷ ಯು.ಟಿ. ಖಾದರ್

ನಿನ್ನೆ ಡಿಸೆಂಬರ್ 14ರಂದು ಭಾನುವಾರ ಸಂಜೆ ನಿಧನ ಹೊಂದಿದ ಉದ್ಯಮಿ, ಹಿರಿಯ ರಾಜಕಾರಣಿ ಹಾಗೂ ಕರ್ನಾಟಕ ವಿಧಾನಸಭೆಯ ಅತ್ಯಂತ ಹಿರಿಯ ಶಾಸಕರಾಗಿದ್ದ ಸರಳ ಸಜ್ಜನಿಕೆಯ ನಾಯಕ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಗೌರವ ಸಲ್ಲಿಸುವ ಸಲುವಾಗಿ, ಇಂದು ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ವಿಧಾನಸಭಾ ಅಧಿವೇಶನವನ್ನು ಮುಂದೂಡಲಾಯಿತು.

ಅಧಿವೇಶನ ಮುಂದೂಡಿದ ನಂತರ ಸನ್ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ದಾವಣಗೆರೆಗೆ ತೆರಳಿ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪ ಅವರು ರಾಜ್ಯ ರಾಜಕಾರಣದಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿ, ಅವರ ನಿಧನ ರಾಜ್ಯಕ್ಕೆ ಅಪಾರ ನಷ್ಟವಾಗಿದೆ ಎಂದು ಸಭಾಧ್ಯಕ್ಷರು ಸಂತಾಪ ವ್ಯಕ್ತಪಡಿಸಿದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page