August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತರ ಮೇಲೆ ಹಲ್ಲೆ ಆರೋಪ: ಜುವೆಲ್ಲರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಪ್ರಕರಣದ ಪಿರ್ಯಾದಿದಾರರು ದಿನಾಂಕ 15-12-2025 ರಂದು ಸೋಮವಾರ ಸಂಜೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಒಂದು ಜುವೆಲ್ಲರಿಯ ಹಿಂಭಾಗದ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ, ಜುವೆಲ್ಲರಿಯ ಸಿಬ್ಬಂದಿ ಸ್ಥಳಕ್ಕೆ ಬಂದು ಪಿರ್ಯಾದಿದಾರರು ಮತ್ತು ಅವರ ಸ್ನೇಹಿತರನ್ನು ತಡೆದು ನಿಲ್ಲಿಸಿದ್ದಾರೆ. ಅವರು ವಿಡಿಯೋ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಕರಾರು ನಡೆಸಿ ಮೂವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಪಿರ್ಯಾದಿಯಲ್ಲಿ ಆರೋಪಿಸಲಾಗಿದೆ.

ಈ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 143/2025 ಅನ್ನು ಕಲಂ 126(2), 115(1) BNS–2023ರ ಅಡಿಯಲ್ಲಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದಂತೆ, ಸದ್ರಿ ಜುವೆಲ್ಲರಿಯ ಸಿಬ್ಬಂದಿಯವರು ಕೂಡ ದಿನಾಂಕ 17-12-2025 ರಂದು ಬುಧವಾರ ಬಾಲಕರ ವಿರುದ್ಧ ಪ್ರತಿದೂರು ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page