January 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತರ ಮೇಲೆ ಹಲ್ಲೆ ಆರೋಪ: ಜುವೆಲ್ಲರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಪ್ರಕರಣದ ಪಿರ್ಯಾದಿದಾರರು ದಿನಾಂಕ 15-12-2025 ರಂದು ಸೋಮವಾರ ಸಂಜೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಒಂದು ಜುವೆಲ್ಲರಿಯ ಹಿಂಭಾಗದ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ, ಜುವೆಲ್ಲರಿಯ ಸಿಬ್ಬಂದಿ ಸ್ಥಳಕ್ಕೆ ಬಂದು ಪಿರ್ಯಾದಿದಾರರು ಮತ್ತು ಅವರ ಸ್ನೇಹಿತರನ್ನು ತಡೆದು ನಿಲ್ಲಿಸಿದ್ದಾರೆ. ಅವರು ವಿಡಿಯೋ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಕರಾರು ನಡೆಸಿ ಮೂವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಪಿರ್ಯಾದಿಯಲ್ಲಿ ಆರೋಪಿಸಲಾಗಿದೆ.

ಈ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 143/2025 ಅನ್ನು ಕಲಂ 126(2), 115(1) BNS–2023ರ ಅಡಿಯಲ್ಲಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದಂತೆ, ಸದ್ರಿ ಜುವೆಲ್ಲರಿಯ ಸಿಬ್ಬಂದಿಯವರು ಕೂಡ ದಿನಾಂಕ 17-12-2025 ರಂದು ಬುಧವಾರ ಬಾಲಕರ ವಿರುದ್ಧ ಪ್ರತಿದೂರು ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

You may also like

News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ
News

ಸಂದೇಶ ಪ್ರಶಸ್ತಿಗಳು 2026 ಘೋಷಣೆ – ಜನವರಿ 21ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರಿನ ಪ್ರತಿಷ್ಠಿತ ಸಂಗೀತಗಾರ ಸೈಮನ್ ಪಾಯ್ಸ್ ಬಜಾಲ್ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿಗಳು ಮೌಲ್ಯಾಧಾರಿತ ಸಮಾಜ ನಿರ್ಮಾಣದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು

You cannot copy content of this page