June 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ ಹರಡಿದ್ದ ಆರೋಪಿ ಬಂಧನ: ಸಿ.ಇ.ಎನ್. ಅಪರಾಧ ಪೊಲೀಸರಿಂದ ಕಾರ್ಯಾಚರಣೆ

mr_a_titude ಎಂಬ ಇನ್‌ಸ್ಟಾಗ್ರಾಂ ಪೇಜ್ ಮುಖಾಂತರ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಕದಡುವ ರೀತಿಯ ಸಂದೇಶಗಳನ್ನು ಹರಿಬಿಟ್ಟ ಆರೋಪದಲ್ಲಿ ಮಂಗಳೂರು ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಸಿ.ಇ.ಎನ್. ಅಪರಾಧ ಪೊಲೀಸರು ಬಂಧಿಸಿದ್ದಾರೆ. ಬಜಪೆ ಪೊಲೀಸ್ ಠಾಣಾ ಅಪರಾಧ ಸಂಖ್ಯೆ 84/2025, ಕಲಂ 353(1)(ಸಿ), 353(2), 56, 57 ಹಾಗೂ 189 ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನನ್ನು ಮಂಗಳೂರಿನ ಕಾಟಿಪಳ್ಳ ನಿವಾಸಿ 23 ವರ್ಷ ಪ್ರಾಯದ ಅಭಿಷೇಕ್ ಎಂ. ಎಂದು ಗುರುತಿಸಲಾಗಿದೆ.

ಆರೋಪಿತನು mr_a_titude ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ Hotel Nisarga ಎಂಬ ಹೋಟೆಲ್‌ನ ಫೋಟೋವನ್ನು ಹಾಕಿ, ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜಪೆ ಪೊಲೀಸರು ರಾಜ ಅತಿಥ್ಯ ನೀಡುತ್ತಿದ್ದಾರೆ, ದಿನವೂ ನಿಸರ್ಗ ಹೋಟೆಲ್‌ನಿಂದ ಬೀಫ್ ಊಟ ಒದಗಿಸುತ್ತಿದ್ದಾರೆ ಎಂಬಂತೆ ಪೊಲೀಸ್ ಇಲಾಖೆಯ ವಿರುದ್ಧ ಸುಳ್ಳು, ಅಪಪ್ರಚಾರಕಾರಿ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದೇಶಗಳು ಸಾರ್ವಜನಿಕರಲ್ಲಿ ಪೊಲೀಸರ ಮೇಲಿನ ನಂಬಿಕೆಯನ್ನು ಕುಂದಿಸುವ ಹಾಗೂ ಶಾಂತಿ ಭಂಗಕ್ಕೆ ಕಾರಣವಾಗುವಂತಿದ್ದವು ಎನ್ನಲಾಗಿದೆ.

ಈ ಸಂಬಂಧ ದಿನಾಂಕ 08-05-2025 ರಂದು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿ, ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರದ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಪೊಲೀಸ್ ದಾಖಲೆಗಳ ಪ್ರಕಾರ, ಆರೋಪಿತನ ವಿರುದ್ಧ ಈ ಹಿಂದೆಯೂ ಕೊಲೆ, ಕೊಲೆಯತ್ನ, ಹಲ್ಲೆ ಹಾಗೂ ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳು ದಾಖಲಾಗಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಕಾಪು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.

  1. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ. 11/2021 – ಕೊಲೆಯತ್ನ ಪ್ರಕರಣ
  2. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ. 137/2021 – ಹಲ್ಲೆ ಪ್ರಕರಣ
  3. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ. 62/2022 – ಕೊಲೆ ಪ್ರಕರಣ
  4. ಕಾಪು ಪೊಲೀಸ್ ಠಾಣಾ ಅ.ಕ್ರ. 62/2024 – ದರೋಡೆ ಪ್ರಕರಣ

ಪ್ರಕರಣದ ತನಿಖೆಯ ಭಾಗವಾಗಿ, ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿತನನ್ನು ಪತ್ತೆಹಚ್ಚಿ ಬಂಧನ ಕ್ರಮ ಕೈಗೊಂಡಿದ್ದು, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

You may also like

News

Thousands Gather in Faith and Devotion as Saint Anthony’s Minor Basilica, Dornahalli Celebrates Grand Annual Feast 2026

Amid an atmosphere of deep faith, prayer, and jubilation, thousands of devotees from across Karnataka and neighbouring states converged at
News

ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರಿಗೆ ಭಾವಪೂರ್ಣ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಬಲಿಷ್ಠ ಹಾಗೂ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)ಇದರ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡಿರುವ ವಂದನೀಯ ಫಾದರ್

You cannot copy content of this page