May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ: ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ನಿಷ್ಕಾಸನೆ

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಸಲ್ಲಿಸಲಾದ ಅರ್ಜಿಯ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 55(ಎ) ಮತ್ತು (ಬಿ) ಅಡಿಯಲ್ಲಿ ದಿನಾಂಕ 17-09-2025 ರಂದು ಗಡಿಪಾರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಪಿಟಿಷನ್ ಸಂಖ್ಯೆ 30021/2025 ಕುರಿತು ಮಾನ್ಯ ಉಚ್ಚ ನ್ಯಾಯಾಲಯವು, ಗಡಿಪಾರು ಆದೇಶವನ್ನು ಕೆ.ಪಿ. ಕಾಯ್ದೆಯ ಯಾವ ಕಲಂ ಅಡಿಯಲ್ಲಿ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟ ಕಾರಣಗಳೊಂದಿಗೆ ಪುನಃ ಆದೇಶ ಮಾಡುವಂತೆ ನಿರ್ದೇಶನ ನೀಡಿತ್ತು. ಉಚ್ಚ ನ್ಯಾಯಾಲಯದ ಆದೇಶದ ಪ್ರತಿಯನ್ನು ಸ್ವೀಕರಿಸಿದ 15 ದಿನಗಳೊಳಗೆ ಹೊಸ ಆದೇಶ ಹೊರಡಿಸುವಂತೆ ಸೂಚಿಸಲಾಗಿತ್ತು.

ಅದರಂತೆ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿಯನ್ನು ದಿನಾಂಕ 16-12-2025 ರಿಂದ 16-09-2026 ರವರೆಗೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಪುನಃ ಆದೇಶ ಹೊರಡಿಸಿದ್ದಾರೆ.

ಈ ಗಡಿಪಾರು ಆದೇಶವನ್ನು ಜಾರಿಗೊಳಿಸುವ ಸಲುವಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಆರೋಪಿತನ ನಿವಾಸಕ್ಕೆ ತೆರಳಿದಾಗ, ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಹಾಜರಿರಲಿಲ್ಲ. ಆದ್ದರಿಂದ, ಕರ್ನಾಟಕ ಪೊಲೀಸ್ ಕಾಯ್ದೆಯ ಅನ್ವಯ ತಲೆಮರೆಸಿಕೊಂಡಿರುವ ವ್ಯಕ್ತಿಗೆ ಅನುಸರಿಸಬೇಕಾದ ಪ್ರಕ್ರಿಯೆ ಪ್ರಕಾರ, ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ ಅವರ ಅನುಮತಿ ಪಡೆದು, ಗಡಿಪಾರು ಆದೇಶವನ್ನು ಸದ್ರಿಯವರ ಮನೆಯ ಗೋಡೆಯ ಮೇಲೆ ಅಂಟಿಸಿ ಹಾಗೂ ಉಜಿರೆ ಪರಿಸರದಲ್ಲಿ ಸಾರ್ವಜನಿಕವಾಗಿ ಪ್ರಚಾರ ಮಾಡಿ ಜಾರಿಗೊಳಿಸಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page