January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವ ಪ್ರತಿಭೆಗೆ ರಾಷ್ಟ್ರಮಟ್ಟದ ಗೌರವ – ರಿಶಲ್ ಫೆರ್ನಾಂಡಿಸ್‌ಗೆ ‘ದೇಶ್ ರತ್ನಾ’ ಪ್ರಶಸ್ತಿ

ಮೂಡುಬಿದಿರೆಯ ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆಯಾಗಿರುವ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನ ಪ್ರತಿಷ್ಠಿತ ‘ದೇಶ್ ರತ್ನಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿರುವ ಮಹತ್ವದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಾಧನೆಗಳನ್ನು ಗುರುತಿಸಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತಿದೆ.

ದೆಹಲಿಯ ಭವ್ಯ ಭಾರತ ಮಂಟಪದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಸಮ್ಮುಖದಲ್ಲಿ ರಿಶಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಲಿದೆ. ಭಾರತೀಯ ಯುವ ಅಸೋಸಿಯೇಷನ್ (ನವದೆಹಲಿ) ಹಾಗೂ ವಿವಿಧ ಸಚಿವಾಲಯಗಳ ಜಂಟಿ ಆಶ್ರಯದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಯುವ ವಯಸ್ಸಿನಲ್ಲೇ ಸಾಹಿತ್ಯ, ವಾಗ್ಮಿತ್ವ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ತಮ್ಮದೇ ಆದ ಗುರುತು ಮೂಡಿಸಿರುವ ರಿಶಲ್ ಫೆರ್ನಾಂಡಿಸ್ ಅವರ ಈ ಸಾಧನೆ ಮೂಡುಬಿದಿರೆ ಮಾತ್ರವಲ್ಲದೆ ಇಡೀ ಜಿಲ್ಲೆಯ ಹೆಮ್ಮೆಯಾಗಿದೆ. ಅವರ ಈ ಗೌರವಯುತ ಆಯ್ಕೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಸಾಹಿತ್ಯ ಹಾಗೂ ಸಾಮಾಜಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

You may also like

News

ಸೂರಿಕುಮೇರುವಿನ ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬ್ರಷ್ಟಾಚಾರದ ಆರೋಪ ಸಂಪೂರ್ಣ ಸುಳ್ಳು – ಹಿಂದಿನ ಆಡಳಿತ ಮಂಡಳಿಯ ಖಡಕ್ ಸ್ಪಷ್ಟನೆ

ಬ್ರಷ್ಟಾಚಾರ ನಡೆದಿದ್ದರೆ ಧರ್ಮಾಧ್ಯಕ್ಷರ ಮೌನ ಹೇಗೆ ಸಾಧ್ಯ? – ಅಪಪ್ರಚಾರಕರಿಗೆ ಭಕ್ತಾಧಿಗಳ ನೇರ ಸವಾಲು ನಿಷ್ಟಾವಂತ ಸೇವೆ ನೀಡಿದ ಹಿಂದಿನ ಧರ್ಮಗುರುಗಳ ಹೆಸರುಗಳಿಗೆ ಮಸಿ ಬಳಿಸಲು ಷಡ್ಯಂತ್ರ
News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ

You cannot copy content of this page