April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವ ಪ್ರತಿಭೆಗೆ ರಾಷ್ಟ್ರಮಟ್ಟದ ಗೌರವ – ರಿಶಲ್ ಫೆರ್ನಾಂಡಿಸ್‌ಗೆ ‘ದೇಶ್ ರತ್ನಾ’ ಪ್ರಶಸ್ತಿ

ಮೂಡುಬಿದಿರೆಯ ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆಯಾಗಿರುವ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನ ಪ್ರತಿಷ್ಠಿತ ‘ದೇಶ್ ರತ್ನಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿರುವ ಮಹತ್ವದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಾಧನೆಗಳನ್ನು ಗುರುತಿಸಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತಿದೆ.

ದೆಹಲಿಯ ಭವ್ಯ ಭಾರತ ಮಂಟಪದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಸಮ್ಮುಖದಲ್ಲಿ ರಿಶಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಲಿದೆ. ಭಾರತೀಯ ಯುವ ಅಸೋಸಿಯೇಷನ್ (ನವದೆಹಲಿ) ಹಾಗೂ ವಿವಿಧ ಸಚಿವಾಲಯಗಳ ಜಂಟಿ ಆಶ್ರಯದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಯುವ ವಯಸ್ಸಿನಲ್ಲೇ ಸಾಹಿತ್ಯ, ವಾಗ್ಮಿತ್ವ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ತಮ್ಮದೇ ಆದ ಗುರುತು ಮೂಡಿಸಿರುವ ರಿಶಲ್ ಫೆರ್ನಾಂಡಿಸ್ ಅವರ ಈ ಸಾಧನೆ ಮೂಡುಬಿದಿರೆ ಮಾತ್ರವಲ್ಲದೆ ಇಡೀ ಜಿಲ್ಲೆಯ ಹೆಮ್ಮೆಯಾಗಿದೆ. ಅವರ ಈ ಗೌರವಯುತ ಆಯ್ಕೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಸಾಹಿತ್ಯ ಹಾಗೂ ಸಾಮಾಜಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page