January 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರಿಂದ ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳೊಂದಿಗೆ ಕ್ರಿಸ್ಮಸ್ ಆಚರಣೆ – ಬಾಂಧವ್ಯ ವೃದ್ಧಿಗೆ ಕರೆ

ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಇಂದು ಡಿಸೆಂಬರ್ 25ರಂದು ಗುರುವಾರ ಬೆಳಿಗ್ಗೆ ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಆಶ್ರಮದಲ್ಲಿ ನಡೆದ ದಿವ್ಯ ಬಲಿದಾನವನ್ನು ಅರ್ಪಿಸಿ, ಆಶ್ರಮದ ನಿವಾಸಿಗಳು, ದಾನಿಗಳು, ಹಿತೈಷಿಗಳು ಹಾಗೂ ಸೇವೆಯಲ್ಲಿ ನಿರತರಾಗಿರುವ ಸಿಬ್ಬಂದಿಗಳಿಗಾಗಿ ವಿಶೇಷವಾಗಿ ಪ್ರಾರ್ಥಿಸಿದರು.

ತಮ್ಮ ಪ್ರಬೋಧನೆಯಲ್ಲಿ ಬಿಷಪ್ ಅವರು ದೇವರ ಅವತಾರದ ಮಹತ್ವವನ್ನು ವಿವರಿಸುತ್ತಾ, ಯೇಸುವಿನ ಜನನದ ಮೂಲಕ ದೇವರು ಮನುಕುಲಕ್ಕೆ ತನ್ನನ್ನು ತಾನು ಸ್ಪಷ್ಟವಾಗಿ ಪ್ರಕಟಪಡಿಸಿಕೊಂಡಿದ್ದಾರೆ ಎಂದು ಹೇಳಿದರು. ದೇವರು ಮಗುವಿನ ರೂಪದಲ್ಲಿ ಸೌಮ್ಯ, ಸರಳ, ಕರುಣಾಮಯಿಯಾಗಿ ನಮಗೆ ತಿಳಿದಿರುವುದು ಕ್ರಿಸ್ಮಸ್‌ನ ಮಹಾ ಸಂದೇಶ ಎಂದು ಅವರು ತಿಳಿಸಿದರು. ಕ್ರಿಸ್ಮಸ್ ಕೇವಲ ಬಾಹ್ಯ ಆಚರಣೆಯಾಗಿ ಉಳಿಯದೆ, ಅರ್ಥಪೂರ್ಣ ಸಂಬಂಧಗಳಾಗಿ ರೂಪಾಂತರಗೊಳ್ಳಬೇಕು ಎಂದು ಕರೆ ನೀಡಿದ ಬಿಷಪ್, “ಆಚರಣೆಗಳಿಂದ ಸಂಬಂಧಗಳೆಡೆಗೆ ಸಾಗೋಣ” ಎಂದು ಸಂದೇಶ ನೀಡಿದರು. ದಯೆ, ಸೇವೆ ಮತ್ತು ಪ್ರೀತಿಯ ಮೂಲಕ ಸಹೋದರ ಸಹೋದರಿಯರೊಂದಿಗೆ ಬಾಂಧವ್ಯ ವೃದ್ಧಿಯಾದಾಗಲೇ ಕ್ರಿಸ್ಮಸ್ ನಿಜವಾದ ಅರ್ಥ ಪಡೆಯುತ್ತದೆ ಎಂದು ಅವರು ಒತ್ತಿ ಹೇಳಿದರು.

ದಿವ್ಯ ಬಲಿದಾನದ ನಂತರ ಬಿಷಪ್ ಅವರು ಆಶ್ರಮದ ನಿವಾಸಿಗಳೊಂದಿಗೆ ವೈಯಕ್ತಿಕವಾಗಿ ಸಂವಾದ ನಡೆಸಿ, ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಂತ ಅಂತೋನಿ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫಾದರ್ ಜೆ. ಬಿ. ಕ್ರಾಸ್ತಾ, ಆಡಳಿತಾಧಿಕಾರಿಯಾದ ವಂದನೀಯ ಫಾದರ್ ಪ್ರವೀಣ್ ಅಮೃತ್ ಮಾರ್ಟಿಸ್, ಸಹ ಆಡಳಿತಾಧಿಕಾರಿಯಾದ ವಂದನೀಯ ಫಾದರ್ ನಿಶಾಂತ್ ವಿವಿಯನ್ ರೊಡ್ರಿಗಸ್ ಹಾಗೂ ಕೆನರಾ ಕಮ್ಯುನಿಕೇಶನ್ ಸೆಂಟರ್ ನಿರ್ದೇಶಕರಾದ ವಂದನೀಯ ಫಾದರ್ ಅನಿಲ್ ಐವನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇದಲ್ಲದೆ, ಡಿಸೆಂಬರ್ 24ರ ರಾತ್ರಿ ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಕ್ರಿಸ್ಮಸ್ ಜಾಗರಣೆ ಬಲಿದಾನವನ್ನು ನೆರವೇರಿಸಿದರು. ನೂರಾರು ಭಕ್ತರು ಪಾಲ್ಗೊಂಡ ಈ ಸಂದರ್ಭದಲ್ಲಿ, ಯೇಸುವಿನ ಜನನದ ಮಹತ್ವ ಹಾಗೂ ದೈವವಾಕ್ಯವು ನರರೂಪ ತಾಳಿದ ಅರ್ಥದ ಬಗ್ಗೆ ಅವರು ಸಂದೇಶ ನೀಡಿದರು.

You may also like

News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ
News

ಸಂದೇಶ ಪ್ರಶಸ್ತಿಗಳು 2026 ಘೋಷಣೆ – ಜನವರಿ 21ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರಿನ ಪ್ರತಿಷ್ಠಿತ ಸಂಗೀತಗಾರ ಸೈಮನ್ ಪಾಯ್ಸ್ ಬಜಾಲ್ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿಗಳು ಮೌಲ್ಯಾಧಾರಿತ ಸಮಾಜ ನಿರ್ಮಾಣದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು

You cannot copy content of this page