January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಡಬ ಬಾರ್‌ನಲ್ಲಿ ನಗದು ಹಾಗೂ ಮದ್ಯ ಕಳವು – ನೌಕರನ ವಿರುದ್ಧ ಪ್ರಕರಣ ದಾಖಲು

ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿರುವ ಬಾರ್‌ನಲ್ಲಿ ನಗದು ಹಾಗೂ ಮದ್ಯವನ್ನು ಕಳವು ಮಾಡಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪಿರ್ಯಾದಿದಾರರಾದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ 25 ವರ್ಷ ಪ್ರಾಯದ ವಿಶಾಲ್ ಸ್ಟೀಫನ್ ಅವರು ನೀಡಿದ ದೂರಿನಂತೆ, ಅವರ ತಾಯಿಗೆ ಸೇರಿದ ಬಾರ್‌ನಲ್ಲಿ ಕಡಬ ತಾಲೂಕಿನ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ.ಕೆ. ಎಂಬಾತನು ಕಳೆದ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ದಿನನಿತ್ಯದ ಹಣಕಾಸು ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದನು.

ಡಿಸೆಂಬರ್ 21ರಂದು ಭಾನುವಾರ ರಾತ್ರಿ ಬಾರ್‌ನ ವಹಿವಾಟು ಪರಿಶೀಲನೆ ನಡೆಸಿದ ವೇಳೆ ಲೆಕ್ಕಪತ್ರಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಈ ಬಗ್ಗೆ ಪ್ರಶ್ನಿಸಿದಾಗ ಮರುದಿನ ಎಲ್ಲವೂ ಸರಿಯಾಗುತ್ತದೆ ಹಾಗೂ ವ್ಯಾಪಾರದ ನಗದನ್ನು ಬ್ಯಾಂಕಿಗೆ ಜಮೆ ಮಾಡುವುದಾಗಿ ಹರ್ಷಿತ್ ತಿಳಿಸಿದ್ದಾನೆ. ಆದರೆ ಮರುದಿನ ಹಣ ಜಮೆಯಾಗದ ಹಿನ್ನೆಲೆಯಲ್ಲಿ ಆತನ ವಾಸ್ತವ್ಯವಿದ್ದ ಕೊಠಡಿಗೆ ತೆರಳಿದಾಗ ಆತ ನಾಪತ್ತೆಯಾಗಿರುವುದು ಕಂಡುಬಂದಿದೆ.

ಪರಿಶೀಲನೆ ವೇಳೆ ಸ್ಟಾಕ್ ರೂಮಿನಲ್ಲಿದ್ದ ಸುಮಾರು  ರೂಪಾಯಿ 6,57,104 ಮೌಲ್ಯದ ಮದ್ಯವನ್ನು ಆರೋಪಿಯು ಈ ಮೊದಲೇ ಮಾರಾಟ ಮಾಡಿ, ಅದರ ಮೊತ್ತವನ್ನು ಬ್ಯಾಂಕಿಗೆ ಜಮೆ ಮಾಡದೇ ವಂಚಿಸಿರುವುದು ಹಾಗೂ ಡಿಸೆಂಬರ್ 21ರಂದು ವ್ಯಾಪಾರದ ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 94/2025, ಕಲಂ 303(2), 314, 316(4) BNS–2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

You may also like

News

ಸೂರಿಕುಮೇರುವಿನ ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬ್ರಷ್ಟಾಚಾರದ ಆರೋಪ ಸಂಪೂರ್ಣ ಸುಳ್ಳು – ಹಿಂದಿನ ಆಡಳಿತ ಮಂಡಳಿಯ ಖಡಕ್ ಸ್ಪಷ್ಟನೆ

ಬ್ರಷ್ಟಾಚಾರ ನಡೆದಿದ್ದರೆ ಧರ್ಮಾಧ್ಯಕ್ಷರ ಮೌನ ಹೇಗೆ ಸಾಧ್ಯ? – ಅಪಪ್ರಚಾರಕರಿಗೆ ಭಕ್ತಾಧಿಗಳ ನೇರ ಸವಾಲು ನಿಷ್ಟಾವಂತ ಸೇವೆ ನೀಡಿದ ಹಿಂದಿನ ಧರ್ಮಗುರುಗಳ ಹೆಸರುಗಳಿಗೆ ಮಸಿ ಬಳಿಸಲು ಷಡ್ಯಂತ್ರ
News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ

You cannot copy content of this page