August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ – 400 ಗ್ರಾಂ ನಿಷೇಧಿತ ಗಾಂಜಾ ವಶ, ಆರೋಪಿಯ ಬಂಧನ

ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆ PSI ಜನಾರ್ಧನ ಕೆ.ಎಂ. ಅವರು ಸಿಬ್ಬಂದಿಗಳೊಂದಿಗೆ ಜನವರಿ 01ರಂದು ಗುರುವಾರ ಬೆಳಿಗ್ಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರು ಕಸಬಾ ಗ್ರಾಮ ನಿವಾಸಿ 36 ವರ್ಷ ಪ್ರಾಯದ ಮಹಮ್ಮದ್ ತೌಸೀಫ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ತನ್ನ ಬಳಿ ನಿಷೇಧಿತ ಗಾಂಜಾ ಹೊಂದಿರುವುದಾಗಿ ಆರೋಪಿಯು ಒಪ್ಪಿಕೊಂಡಿದ್ದಾನೆ. ತಪಾಸಣೆ ನಡೆಸಿದಾಗ ಅವನ ಬಳಿ ಒಟ್ಟು 400 ಗ್ರಾಂ ಗಾಂಜಾ ಪತ್ತೆಯಾಗಿದೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 02/2026 ಅಡಿ, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 8(ಸಿ) ಹಾಗೂ 20(ಬಿ)ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page