June 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ – 400 ಗ್ರಾಂ ನಿಷೇಧಿತ ಗಾಂಜಾ ವಶ, ಆರೋಪಿಯ ಬಂಧನ

ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆ PSI ಜನಾರ್ಧನ ಕೆ.ಎಂ. ಅವರು ಸಿಬ್ಬಂದಿಗಳೊಂದಿಗೆ ಜನವರಿ 01ರಂದು ಗುರುವಾರ ಬೆಳಿಗ್ಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರು ಕಸಬಾ ಗ್ರಾಮ ನಿವಾಸಿ 36 ವರ್ಷ ಪ್ರಾಯದ ಮಹಮ್ಮದ್ ತೌಸೀಫ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ತನ್ನ ಬಳಿ ನಿಷೇಧಿತ ಗಾಂಜಾ ಹೊಂದಿರುವುದಾಗಿ ಆರೋಪಿಯು ಒಪ್ಪಿಕೊಂಡಿದ್ದಾನೆ. ತಪಾಸಣೆ ನಡೆಸಿದಾಗ ಅವನ ಬಳಿ ಒಟ್ಟು 400 ಗ್ರಾಂ ಗಾಂಜಾ ಪತ್ತೆಯಾಗಿದೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 02/2026 ಅಡಿ, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 8(ಸಿ) ಹಾಗೂ 20(ಬಿ)ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

EVIDENCIA 2026 -Strengthens Evidence-Based Homoeopathic Research

Father Muller Homoeopathic Medical College and Hospital, in association with the Indian Homoeopathic Medical Association (IHMA), Mangaluru Chapter, and the
News

ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರ ದಿಢೀರ್ ದಾಳಿ – ಮೂವರ ಬಂಧನ, ಸೊತ್ತುಗಳ ವಶ

ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಜಾಗಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ

You cannot copy content of this page