August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬ್ಯಾಂಕ್ ಆಫ್ ಬರೋಡಾ ಪೆರ್ನೆ ಶಾಖೆಯಲ್ಲಿ ₹71.41 ಲಕ್ಷ ವಂಚನೆ – ಜಂಟಿ ವ್ಯವಸ್ಥಾಪಕನ ವಿರುದ್ಧ ಪ್ರಕರಣ

ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಭಾರೀ ಹಣಕಾಸು ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ದಿನಾಂಕ 04-09-2023 ರಿಂದ 19-12-2025ರ ಅವಧಿಯಲ್ಲಿ ಶಾಖೆಯ ಜಂಟಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ನಿವಾಸಿ 30 ವರ್ಷ ಪ್ರಾಯದ ಸುಬ್ರಹ್ಮಣ್ಯಂ ಅವರು ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದರು.

ಆರೋಪಿತನು ದಿನಾಂಕ 06-02-2024 ರಿಂದ 16-12-2025 ರವರೆಗೆ ಎಟಿಎಂಗೆ ನಿಗದಿತ ಪ್ರಮಾಣದ ನಗದು ಜಮಾ ಮಾಡದೇ ಕಡಿಮೆ ಹಣ ಜಮಾ ಮಾಡಿ ಸುಮಾರು ₹70,86,000 ಮೊತ್ತವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ದಿನಾಂಕ 19-12-2025ರಂದು ಸೇಫ್ ಲಾಕರ್ ಪರಿಶೀಲನೆಯ ವೇಳೆ ₹55,000 ಮೌಲ್ಯದ 4.400 ಗ್ರಾಂ ಚಿನ್ನವೂ ವಂಚನೆಯಾಗಿರುವುದು ಪತ್ತೆಯಾಗಿದೆ. ಹಣದ ದುರುಪಯೋಗ ಪತ್ತೆಯಾಗುತ್ತಿದ್ದಂತೆ ಆರೋಪಿತನು ದಿನಾಂಕ 17-12-2025 ರಂದು ಯಾರಿಗೂ ತಿಳಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಒಟ್ಟು ವಂಚನೆಯ ಮೊತ್ತ ₹71,41,000 ಆಗಿದೆ.

ಈ ಕುರಿತು ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರಾದ ಜೆಪ್ಪು, ಮಂಗಳೂರು ನಿವಾಸಿ 50 ವರ್ಷ ಪ್ರಾಯದ C.V.S. ಚಂದ್ರಶೇಖರ್ ಅವರು ದಿನಾಂಕ 23-12-2025 ರಂದು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025 ಅಡಿಯಲ್ಲಿ BNS-2023 ಕಲಂ 314, 316(5), 318(2) ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page