June 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಪೆರ್ಲಾಪು ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ತಾಲೂಕಿನ ಹನೀಫ್ ಪೆರ್ಲಾಪು ಅವರನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಹಾಗೂ ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬಿ. ರಾಮನಾಥ ರೈ ಅವರ ಶಿಫಾರಸ್ಸಿನ ಮೇರೆಗೆ, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರು ಹನೀಫ್ ಪೆರ್ಲಾಪು ಅವರನ್ನು ರಾಜ್ಯ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿದ್ದಾರೆ.

ನೇಮಕಾತಿ ಆದೇಶ ಪತ್ರವನ್ನು ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹನೀಫ್ ಪೆರ್ಲಾಪು ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷೆ ಹರಿಣಿ ಗೌಡ, ಸರಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ ಸಾದಿಕ್ ಬರೆಪಾಡಿ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಉನೈಸ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

 

You may also like

News

ಮಂಗಳೂರಿನ ಜೆಪ್ಪು ಮತ್ತು ಮಿಲಾಗ್ರಿಸ್‌ನಲ್ಲಿ ಭಕ್ತಿಸಾಗರ – ಸಂತ ಅಂತೋನಿಯವರ ವಾರ್ಷಿಕ ಹಬ್ಬದ ಸಂಭ್ರಮ

ಕಳೆದುಹೋದ ವಸ್ತುಗಳನ್ನಷ್ಟೇ ಅಲ್ಲ, ಕಳೆದುಹೋದ ದೈವತ್ವವನ್ನು ಹುಡುಕಿಕೊಳ್ಳಿ – ಬಿಷಪ್ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಜಗತ್ಪ್ರಸಿದ್ಧ ಪವಾಡ ಪುರುಷ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು ನಗರದ
News

CODP Empowers 140 Students with ₹11.52 Lakh Education Aid

In a heartwarming initiative aimed at supporting higher education, the Canara Organisation for Development and Peace (CODP), the social development

You cannot copy content of this page