January 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಠಾಣಾ ವ್ಯಾಪ್ತಿಯ ಅಬ್ದುಲ್ ಖಾದರ್ @ ಶೌಕತ್ ಗಡಿಪಾರು

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಸಬ ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ಖಾದರ್ @ ಶೌಕತ್ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಮೂರು ಪ್ರಕರಣಗಳು ದಾಖಲಾಗಿದ್ದವು. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯ ಆಧಾರದಲ್ಲಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಅದರಂತೆ, ಅಬ್ದುಲ್ ಖಾದರ್ @ ಶೌಕತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಲಾಗಿದೆ. ಸದರಿ ಆದೇಶದಂತೆ ಜನವರಿ 08ರಂದು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಗೆ ಪೊಲೀಸ್ ಭದ್ರತೆಯೊಂದಿಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.

You may also like

News

ಸಂದೇಶ ಪ್ರಶಸ್ತಿಗಳು 2026 ಘೋಷಣೆ – ಜನವರಿ 21ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರಿನ ಪ್ರತಿಷ್ಠಿತ ಸಂಗೀತಗಾರ ಸೈಮನ್ ಪಾಯ್ಸ್ ಬಜಾಲ್ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿಗಳು ಮೌಲ್ಯಾಧಾರಿತ ಸಮಾಜ ನಿರ್ಮಾಣದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು
News

ಸಿಒಡಿಪಿ ಸಂಸ್ಥೆಯಲ್ಲಿ ಒಕ್ಕೂಟ ಬಲವರ್ಧನೆ ತರಬೇತಿ ಯಶಸ್ವಿ

ಜನವರಿ 8ರಂದು ಗುರುವಾರ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿ ಮಿಸೋರಿಯರ್ ಮತ್ತು ಬೆಂಗಳೂರು ಕ್ರಾಸ್ ಸಂಸ್ಥೆಗಳ ಸಹಯೋಗದೊಂದಿಗೆ ಸಿಒಡಿಪಿ ಸಂಸ್ಥೆಯಲ್ಲಿ ಒಕ್ಕೂಟ ಬಲವರ್ಧನೆ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

You cannot copy content of this page