June 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂದೇಶ ಪ್ರಶಸ್ತಿಗಳು 2026 ಘೋಷಣೆ – ಜನವರಿ 21ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರಿನ ಪ್ರತಿಷ್ಠಿತ ಸಂಗೀತಗಾರ ಸೈಮನ್ ಪಾಯ್ಸ್ ಬಜಾಲ್ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿಗಳು

ಮೌಲ್ಯಾಧಾರಿತ ಸಮಾಜ ನಿರ್ಮಾಣದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು 2026ನೇ ಸಾಲಿನ ಸಂದೇಶ ಪ್ರಶಸ್ತಿಗಳನ್ನು ಅಧಿಕೃತವಾಗಿ ಘೋಷಿಸಿದೆ. 1989ರಲ್ಲಿ ಸ್ಥಾಪನೆಯಾಗಿ 1991ರಲ್ಲಿ ದತ್ತಿ ಸಂಸ್ಥೆಯಾಗಿ ನೋಂದಾಯಿತಗೊಂಡಿರುವ ಈ ಪ್ರತಿಷ್ಠಾನವು ಕಲೆ, ಸಂಸ್ಕೃತಿ, ಸಾಹಿತ್ಯ, ಶಿಕ್ಷಣ, ಸಂಗೀತ, ಮಾಧ್ಯಮ ಮತ್ತು ಸಮಾಜಸೇವೆಯ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುತ್ತಿದೆ.

ಸಂದೇಶ ಪ್ರಶಸ್ತಿಗಳು 2026 ಪ್ರದಾನ ಸಮಾರಂಭವು ಜನವರಿ 21ರಂದು ಬುಧವಾರ ಸಂಜೆ 5.30ಕ್ಕೆ ಮಂಗಳೂರಿನ ಸಂದೇಶ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಹೆನ್ರಿ ಡಿಸೋಜ ವಹಿಸಲಿದ್ದು, ಖ್ಯಾತ ನಿರ್ದೇಶಕ, ನಟ ಹಾಗೂ ಚಿತ್ರಕಥೆಗಾರ ಡಾ. ನಾಗತಿಹಳ್ಳಿ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ, ಉಡುಪಿ ಧರ್ಮಕ್ಷೇತ್ರದ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಇಕೋ ಟೂರಿಸಂ ಬೋರ್ಡ್ ಅಧ್ಯಕ್ಷೆ ಶಾಲೆಟ್ ಪಿಂಟೊ, ವಿವಿಧ ಸಾಹಿತ್ಯ ಅಕಾಡೆಮಿಗಳ ಅಧ್ಯಕ್ಷರು, ಸಾಹಿತಿಗಳು ಹಾಗೂ ಗಣ್ಯರು ಉಪಸ್ಥಿತರಿರಲಿದ್ದಾರೆ.

ಸಂದೇಶ ಪ್ರಶಸ್ತಿಗಳು 2026 ಪುರಸ್ಕೃತರು:

* ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿ – ಡಾ. ನಾ. ಮೊಗಸಾಲೆ

* ಸಂದೇಶ ಕೊಂಕಣಿ ಸಾಹಿತ್ಯ ಪ್ರಶಸ್ತಿ – ಪ್ಯಾಟ್ರಿಕ್ ಕಾಮಿಲ್ ಮೋರಸ್

* ಸಂದೇಶ ತುಳು ಸಾಹಿತ್ಯ ಪ್ರಶಸ್ತಿ – ಡಾ. ಇಂದಿರಾ ಹೆಗ್ಗಡೆ

* ಸಂದೇಶ ಮಾಧ್ಯಮ ಪ್ರಶಸ್ತಿ – ತುಂಗರೇಣುಕ

* ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿ – ಸೈಮನ್ ಪಾಯ್ಸ್

* ಸಂದೇಶ ಕಲಾ ಪ್ರಶಸ್ತಿ – ಶ್ರೀನಿವಾಸ ಜಿ. ಕಪ್ಪಣ್ಣ

* ಸಂದೇಶ ಶಿಕ್ಷಣ ಪ್ರಶಸ್ತಿ – ಡಾ. ದತ್ತಾತ್ರೇಯ ಅರಳಿಕಟ್ಟೆ

* ಸಂದೇಶ ವಿಶೇಷ ಸೇವಾ ಪ್ರಶಸ್ತಿ – ನವಜೀವನ ರಿಹ್ಯಾಬಿಲಿಟೇಷನ್ ಸೆಂಟರ್ ಫಾರ್ ದ ಡಿಸೇಬಲ್ಡ್, ಬಳ್ಳಾರಿ

ಸಾಹಿತ್ಯ, ಕಲೆ, ಶಿಕ್ಷಣ, ಸಂಗೀತ, ಮಾಧ್ಯಮ ಹಾಗೂ ಸಮಾಜ ಸೇವೆಯ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ ಸಾಧಕರನ್ನು ಗೌರವಿಸುವ ಮೂಲಕ, ಮೌಲ್ಯಾಧಾರಿತ ಸೇವೆಗಳ ಮಹತ್ವವನ್ನು ಸಮಾಜಕ್ಕೆ ತಲುಪಿಸುವ ಉದ್ದೇಶವನ್ನು ಸಂದೇಶ ಪ್ರಶಸ್ತಿಗಳು ಹೊಂದಿವೆ. 2026ರ ಸಂದೇಶ ಪ್ರಶಸ್ತಿಗಳ ಸಮಾರಂಭವು ಪ್ರತಿಭೆ, ಸಮರ್ಪಣೆ ಮತ್ತು ಸಾಮಾಜಿಕ ಬದ್ಧತೆಯ ಪ್ರೇರಣಾದಾಯಕ ಸಂಭ್ರಮವಾಗಲಿದೆ ಎಂದು ಪ್ರತಿಷ್ಠಾನ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕ:

ವಂದನೀಯ ಫಾದರ್ ಸುಧೀಪ್ ಪಾಲ್, MSFS

ನಿರ್ದೇಶಕರು, ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ

ದೂರವಾಣಿ: +91 9113646986

You may also like

News

ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರ ದಿಢೀರ್ ದಾಳಿ – ಮೂವರ ಬಂಧನ, ಸೊತ್ತುಗಳ ವಶ

ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಜಾಗಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ
News

Thousands Gather in Faith and Devotion as Saint Anthony’s Minor Basilica, Dornahalli Celebrates Grand Annual Feast 2026

Amid an atmosphere of deep faith, prayer, and jubilation, thousands of devotees from across Karnataka and neighbouring states converged at

You cannot copy content of this page