August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫೆಬ್ರವರಿ 14–15ರಂದು ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ–ವಿಜಯ ಜೋಡುಕೆರೆ ಕಂಬಳ

ಮನ್ಕುತೋಟಗುತ್ತು ಹಾಗೂ ನಾಡಾಜೆಗುತ್ತು ಇವರ ಸ್ಮರಣಾರ್ಥ ನಗರದ ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ–ವಿಜಯ ಜೋಡುಕೆರೆ ಕಂಬಳ ಫೆಬ್ರವರಿ 14 ಮತ್ತು 15ರಂದು ಭವ್ಯವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಹಾಗೂ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.

ಅವರು ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೆಬ್ರವರಿ 14ರಂದು ಬೆಳಿಗ್ಗೆ 8.30ಕ್ಕೆ ಶ್ರೀ ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ ವೇದಮೂರ್ತಿ ಬ್ರಹ್ಮಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳ ಉದ್ಘಾಟನೆ ನಡೆಯಲಿದೆ ಎಂದರು.

ಈ ಕಾರ್ಯಕ್ರಮಕ್ಕೆ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್. ಗಣೇಶ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ನಟ–ನಟಿಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಈ ಬಾರಿ ಕಂಬಳದಲ್ಲಿ 150ಕ್ಕೂ ಅಧಿಕ ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಜೇತ ಕೋಣಗಳಿಗೆ ಚಿನ್ನದ ಪದಕದೊಂದಿಗೆ ಶಾಶ್ವತ ಫಲಕ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

ಸಮಿತಿಯ ಗೌರವ ಸಲಹೆಗಾರ ಜಪ್ಪುಗುಡ್ಡೆ ಗುತ್ತು ಭುಜಂಗ ಶೆಟ್ಟಿ ಹಾಗೂ ಕಂಬಳ ಸಮಿತಿ ಅಧ್ಯಕ್ಷ ಮನ್ಕುತೋಟಗುತ್ತು ಅನಿಲ್ ಜೆ. ಶೆಟ್ಟಿ ಮಾತನಾಡಿ, ಕಂಬಳದಲ್ಲಿ ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಜೋಡುಕೆರೆ ಕಂಬಳ ಹಾಗೂ ತಿರುವೈಲು ಕಂಬಳದಲ್ಲಿ ಸಮಯ ನಿಗದಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇತರೆ ಕಂಬಳಗಳಲ್ಲೂ ಇದೇ ಮಾದರಿಯನ್ನು ಅಳವಡಿಸಿಕೊಳ್ಳುವ ಪ್ರಯತ್ನ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ವೀಣಾಮಂಗಳ, ಪ್ರವೀಣಚಂದ್ರ ಆಳ್ವ (ತಿರುವೈಲ್ ಗುತ್ತು), ಶಕೀನ್ ಶೆಟ್ಟಿ, ಸಂದೀಪ್ ಶೆಟ್ಟಿ, ನಿಶಾನ್ ಪೂಜಾರಿ, ಗೌರವ ಸಲಹೆಗಾರರಾದ ಭುಜಂಗ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ಜೆ. ನಾಗೇಂದ್ರ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page