July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಒಕ್ಕುಪೆನ್ಸಿ ಸರ್ಟಿಫಿಕೇಟ್ ಇಲ್ಲದ ಮನೆಗಳಿಗೆ ಬೆಸ್ಕಾಂ ಶಾಕ್ – ವಿದ್ಯುತ್ ಸಂಪರ್ಕ ಸ್ಥಗಿತ, ಅಕ್ರಮ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಒಕ್ಕುಪೆನ್ಸಿ ಸರ್ಟಿಫಿಕೇಟ್ (OC) ಪಡೆಯದೇ ಮನೆ ನಿರ್ಮಿಸಿ ವಾಸಕ್ಕೆ ಪ್ರವೇಶಿಸಿದವರಿಗೆ ಬೆಸ್ಕಾಂ ಬಿಗ್ ಶಾಕ್ ನೀಡಿದೆ. OC ಇಲ್ಲದ ಮನೆಗಳಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಸ್ಥಗಿತಗೊಳಿಸಿದ್ದು, ಅಕ್ರಮ ವಿದ್ಯುತ್ ಬಳಕೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ OC ಇಲ್ಲದೆ ವಿದ್ಯುತ್ ಬಳಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್‌ನಿಂದ OC ಕಡ್ಡಾಯವಾಗಿದ್ದರೂ, ನಿರ್ಮಾಣ ಹಂತದಲ್ಲಿದ್ದ ಅನೇಕ ಮನೆಗಳು ನಂತರ ವಾಸಕ್ಕೆ ಪ್ರವೇಶಿಸಿದ್ದರಿಂದ ಅಕ್ರಮ ವಿದ್ಯುತ್ ಬಳಕೆಯ ಪ್ರಕರಣಗಳು ಹೆಚ್ಚಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್ ತಿಂಗಳಲ್ಲಿ ಮಾತ್ರವೇ ಬೆಸ್ಕಾಂ ವಿಜಿಲೆನ್ಸ್ ವಿಭಾಗ 419 ಅಕ್ರಮ ವಿದ್ಯುತ್ ಬಳಕೆಯ ಪ್ರಕರಣಗಳನ್ನು ದಾಖಲಿಸಿದ್ದು, ಇದು 2024ರ ಡಿಸೆಂಬರ್‌ಗೆ ಹೋಲಿಸಿದರೆ 190 ಪ್ರಕರಣಗಳ ಹೆಚ್ಚಳವಾಗಿದೆ. ಜುಲೈ ನಂತರ ಬೆಸ್ಕಾಂ ಸಹಾಯವಾಣಿಗೆ ಬರುತ್ತಿರುವ ದೂರುಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ.

ಮುಖ್ಯವಾಗಿ ನೆರೆಹೊರೆಯವರಿಂದ ಬಂದ ದೂರುಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಪ್ರತಿ ಎರಡು ದಿನಗಳಿಗೊಮ್ಮೆ ತಪಾಸಣೆ ನಡೆಸಲಾಗುತ್ತಿದೆ. ಕೆಲ ಹೊಸ ಮನೆ ಮಾಲೀಕರು ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಲೈನ್‌ಗಳನ್ನು ಎಳೆಯುತ್ತಿರುವುದು ಪತ್ತೆಯಾಗಿದೆ.

OC ಇಲ್ಲದೆ ವಿದ್ಯುತ್ ಬಳಸುವವರ ವಿರುದ್ಧ ಮುಂದೆಯೂ ಕಠಿಣ ಕ್ರಮ ಮುಂದುವರೆಯಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page