August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಪಿಸಿಸಿ ಕಾನೂನು–ಮಾನವ ಹಕ್ಕು–RTI ವಿಭಾಗದ ಬಂಟ್ವಾಳ ಕ್ಷೇತ್ರಾಧ್ಯಕ್ಷರಾಗಿ ನೋಟರಿ ಸುರೇಶ್ ಪೂಜಾರಿ ನೇಮಕ

ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ಬಂಟ್ವಾಳ ಬಾರ್ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ, ನೋಟರಿ ಹಾಗೂ ನ್ಯಾಯವಾದಿ ಸುರೇಶ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯಾಧ್ಯಕ್ಷ ಸಿ.ಎಂ. ಧನುಂಜಯ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಮನೋಜ್ ರಾಜ್ ರಾಜೀವ ಅವರು ಈ ನೇಮಕಾತಿ ಆದೇಶ ಪತ್ರವನ್ನು ಹೊರಡಿಸಿದ್ದಾರೆ.

ಈ ವಿಭಾಗದ ಉಪಾಧ್ಯಕ್ಷರಾಗಿ ಉಮಾಕರ ನೆಕ್ಕರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಗಝ್ಝಾಲಿ ಕೊಳ್ನಾಡು, ಕಾರ್ಯದರ್ಶಿಯಾಗಿ ವಿನ್ಸೆಂಟ್ ಪಿಂಟೋ ಅಲ್ಲಿಪಾದೆ, ಜೊತೆ ಕಾರ್ಯದರ್ಶಿಯಾಗಿ ನಿರ್ಮಲ ಮೊಡಂಕಾಪು ಹಾಗೂ ಕೋಶಾಧಿಕಾರಿಯಾಗಿ ಮೋಹನ್ ಕುಮಾರ್ ನೆತ್ತರಕೆರೆ ಅವರನ್ನು ಆಯ್ಕೆಗೊಳಿಸಲಾಗಿದೆ.

ಮಾಜಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page