August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಸ್ ನಿಲ್ದಾಣಗಳಲ್ಲಿ ಸರಣಿ ಬ್ಯಾಗ್ ಕಳ್ಳತನ – ಅಂತರ್‌ಜಿಲ್ಲಾ ಕಳ್ಳನ ಬಂಧನ

₹6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಮಹಿಳೆಯರು ಹಾಗೂ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಬ್ಯಾಗ್ ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲಾ ಸರಣಿ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ KSRTC ಬಸ್ ನಿಲ್ದಾಣದಲ್ಲಿ ದಿನಾಂಕ 23-01-2026 ರಂದು ಸಂಜೆ 7 ಗಂಟೆಯ ಸುಮಾರಿಗೆ, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಹಿರಿಯ ನಾಗರಿಕರು ಕುಳಿತಿದ್ದ ಬಸ್ಸಿನಿಂದ ಸುಮಾರು 45 ಗ್ರಾಂ ಚಿನ್ನಾಭರಣ ಮತ್ತು ₹20,000 ನಗದು ಹೊಂದಿದ್ದ ಟ್ರಾಲಿ ಬ್ಯಾಗ್ ಕಳ್ಳತನವಾದ ಕುರಿತು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಮೊ.ನಂ. 10/2026, ಕಲಂ 303(2) BNS-2023 ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಪ್ರಕರಣದ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ವಿನಾಯಕ ತೊರಗಲ್ (ಪಿಎಸ್ಐ) ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಜನವರಿ 28ರಂದು ಬುಧವಾರ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದ ಸಮೀಪ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ಮಡಿಕೇರಿ ತ್ಯಾಗರಾಜ್ ಕಾಲೋನಿ, ಗಫರ್ ಬಿಲ್ಡಿಂಗ್ ದಾಸವಾಳ ರಸ್ತೆ ನಿವಾಸಿ 44 ವರ್ಷ ಪ್ರಾಯದ ಮಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ. ಆರೋಪಿತನಿಂದ ಒಟ್ಟು ₹6,47,920 ಮೌಲ್ಯದ 46.28 ಗ್ರಾಂ ಚಿನ್ನಾಭರಣ ಹಾಗೂ ₹5,000 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಜನವರಿ 29ರಂದು ಗುರುವಾರ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರ ತನಿಖೆಯಲ್ಲಿ, ಆರೋಪಿತನು ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ ಮಾಡುವ ರೂಢಿಗತ ಅಪರಾಧಿಯಾಗಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಕಳ್ಳತನ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಹಾಸನ ಜಿಲ್ಲೆಯ ಮನೆ ಕಳ್ಳತನ ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ಆತ, ನ್ಯಾಯಾಲಯಕ್ಕೆ ಹಾಜರಾಗದೇ ಇರುವ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ವಾರೆಂಟ್ ಕೂಡ ಜಾರಿಗೊಳಿಸಲಾಗಿತ್ತು. ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page