May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಳ್ಳಾಲ ಠಾಣೆಯ ಎನ್‌ಡಿಪಿಎಸ್ ಪ್ರಕರಣ

14 ವರ್ಷಗಳ ಬಳಿಕ ತಲೆಮಾರಿಕೊಂಡಿದ್ದ ಆರೋಪಿ ದಸ್ತಗಿರಿ

ಉಳ್ಳಾಲ ಪೊಲೀಸ್ ಠಾಣೆಯ ಮೊ.ನಂ. 312/2011, ಕಲಂ 8(c)(ii) ಓದುಗ 20(b) ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಹಾಗೂ ಮಾನ್ಯ ಜೆಎಂಎಫ್‌ಸಿII ನ್ಯಾಯಾಲಯದ ಸಿಸಿ ನಂ. 1757/2013 ಪ್ರಕರಣದಲ್ಲಿ ತಲೆಮಾರಿಕೊಂಡಿದ್ದ ಆರೋಪಿ ಮಂಗಳೂರಿನ ಉಳ್ಳಾಲದ ಮುಕ್ಕಚೇರಿ, ತೋಯಿಬ್ ಮಸೀದಿ ಎದುರುಗಡೆಯ ಶಾಜ್ಮೀನ್ ಅಪಾರ್ಟ್ಮೆಂಟ್ ರೂಂ ನಂ. 07, ರ ನಿವಾಸಿ  ಮೊಹಮ್ಮದ್ ಸಂಶೀರ್ ನನ್ನು ಪೊಲೀಸರು ಪತ್ತೆಹಚ್ಚಿ ಈ ದಿನ ದಸ್ತಗಿರಿ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಆರೋಪಿತನು ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಾನ್ಯ ಜೆಎಂಎಫ್‌ಸಿII ನ್ಯಾಯಾಲಯವು ಆರೋಪಿತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಿತ್ತು. ಅದನ್ವಯ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು 14 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page