August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೆಸಿಐ ಕಾಪು ಘಟಕದ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೆಸಿ ವಿಕ್ಕಿ ಪೂಜಾರಿ ಮಡುಂಬು ಆಯ್ಕೆ

28 ವರ್ಷಗಳ ಇತಿಹಾಸ ಹೊಂದಿರುವ ವಲಯ–15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ. ಪದಗ್ರಹಣ ಸಮಾರಂಭವು ಜನವರಿ 31ರಂದು ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವಲಯಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ವಿಟ್ಲ, ವಲಯ ಪೂರ್ವಾಧ್ಯಕ್ಷ ಜೆಸಿ ರಾಕೇಶ್ ಕುಂಜೂರು, ವಲಯ ಉಪಾಧ್ಯಕ್ಷ ಜೆಸಿ ಅರುಣ್ ಮಾಂಜ ಹಾಗೂ ನಿಕಟಪೂರ್ವ ಅಧ್ಯಕ್ಷೆ ಜೆಸಿ ಅನಿತಾ ಹೆಗ್ಡೆ ಉಪಸ್ಥಿತರಿದ್ದರು.

ಈ ಸಂದರ್ಭ 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಹಾಗೂ ಗೃಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀ ನಾರಾಯಣ ರಾವ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

2026ನೇ ಸಾಲಿಗೆ ಜೆಸಿಐ ಕಾಪು ಘಟಕದ ಪದಾಧಿಕಾರಿಗಳಾಗಿ ಕಾರ್ಯದರ್ಶಿಯಾಗಿ ಜೆಸಿ ಶ್ರುತಿ ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೇಟರ್ ಆಗಿ ಜೆಸಿ ಕವಿತಾ ಕುಂದರ್, ಜೂನಿಯರ್ ಜೆಸಿ ಅಧ್ಯಕ್ಷರಾಗಿ ಜೆಜೆಸಿ ಮನ್ವಿತ್ ಬಂಗೇರ ಹಾಗೂ ಕೋಶಾಧಿಕಾರಿಯಾಗಿ ಜೆಸಿ ಶ್ರಾವ್ಯ ಜೆ. ಬಂಗೇರ ಅವರು ಕಾರ್ಯನಿರ್ವಹಿಸಲಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page