June 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣದ ಚೊಚ್ಚಲ ತೀರ್ಪು

ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿ ದೋಷಮುಕ್ತ

ಪುತ್ತೂರಿನ ಪ್ರಖ್ಯಾತ ಹಾಗೂ ಪ್ರತಿಷ್ಠಿತ ನ್ಯಾಯವಾದಿ ಮಹೇಶ್ ಕಜೆ ಅವರು ಮಂಡಿಸಿದ ವಾದ

ಪುತ್ತೂರು ಬನ್ನೂರಿನ ಆನೆಮಜಲಿನಲ್ಲಿ ನೂತನವಾಗಿ ಲೋಕಾರ್ಪಣೆಗೊಂಡ ನ್ಯಾಯಾಲಯ ಸಂಕೀರ್ಣದಲ್ಲಿ ಪ್ರಥಮ ತೀರ್ಪು ಪ್ರಕಟವಾಗಿದ್ದು, ಅಕ್ರಮ ಮದ್ಯ ಮಾರಾಟದ ಆರೋಪ ಹೊತ್ತಿದ್ದ ವ್ಯಕ್ತಿಯೊಬ್ಬರು ದೋಷಮುಕ್ತರಾಗಿದ್ದಾರೆ.

ಪ್ರಕರಣದ ಹಿನ್ನೆಲೆ:

2022ರ ಜೂನ್ 1 ರಂದು ನೆಲ್ಯಾಡಿ ಶಿರಾಡಿ ಗ್ರಾಮದ ಕುದ್ರೋಳಿ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂಬಂಧ ಪದ್ಮನಾಭ ಎಂಬವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ನ್ಯಾಯಾಲಯದ ತೀರ್ಪು:

ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಈ ಪ್ರಕರಣದ ವಿಚಾರಣೆ ಪುತ್ತೂರಿನ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯಿತು. ಸಾಕ್ಷಿದಾರರ ವಿಚಾರಣೆಯ ವೇಳೆ ಆರೋಪದ ವಿರುದ್ಧ ಯಾವುದೇ ಬಲವಾದ ಪುರಾವೆಗಳು ಲಭ್ಯವಾಗದ ಕಾರಣ, ನ್ಯಾಯಾಧೀಶರಾದ ಶಿವಣ್ಣ ಅವರು ಆರೋಪಿ ಪದ್ಮನಾಭ ಅವರನ್ನು ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಾದಿಸಿದ ವಕೀಲರು :

ಆರೋಪಿ ಪರವಾಗಿ ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ಹಾಗೂ ಪ್ರತಿಷ್ಠಿತ ನ್ಯಾಯವಾದಿ ಮಹೇಶ್ ಕಜೆ ಅವರು ವಾದ ಮಂಡಿಸಿದ್ದರು.

ಐತಿಹಾಸಿಕ ಕ್ಷಣ:

ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಕಲಾಪಗಳು ಆರಂಭಗೊಂಡ ಮೊದಲ ದಿನವೇ ಈ ತೀರ್ಪು ಹೊರಬಿದ್ದಿರುವುದು ವಿಶೇಷ. ಆನೆಮಜಲಿನಲ್ಲಿ ನ್ಯಾಯಾಂಗ ಕಾರ್ಯ ಚಟುವಟಿಕೆಗಳು ಶುರುವಾದ ಬಳಿಕ ದಾಖಲಾದ ಅಧಿಕೃತ ಮೊದಲ ತೀರ್ಪು ಇದಾಗಿದೆ.

You may also like

News

ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರಿಗೆ ಭಾವಪೂರ್ಣ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಬಲಿಷ್ಠ ಹಾಗೂ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)ಇದರ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡಿರುವ ವಂದನೀಯ ಫಾದರ್
News

ಲಘು ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ತುರ್ತು ಸಿಪಿಆರ್ ನೀಡಿ ಜೀವ ಉಳಿಸಿದ ಬಂಟ್ವಾಳ ನಗರ ಠಾಣೆಯ ‘ನೈಟ್ ಬೀಟ್’ ಸಿಬ್ಬಂದಿಗಳು

ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆಗೆ ಪಾತ್ರರಾದ ಸಿಬ್ಬಂದಿಗಳಾದ ವಿನೋದ್ ಹಾಗೂ ಜಯಗಣೇಶ್ ರಾತ್ರಿ ಇಡೀ ಜಗತ್ತು ಮಲಗಿರುವಾಗ ಸಾರ್ವಜನಿಕರ ರಕ್ಷಣೆಗಾಗಿ ಗಸ್ತು ತಿರುಗುವ ಪೊಲೀಸರು, ಕೇವಲ ಕಾನೂನು

You cannot copy content of this page