August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯಲ್ಲಿ ಶಾಲಾ ವಿದ್ಯಾರ್ಥಿನಿ ಅಪಹರಣ

ಚೂರಿ ಇರಿತ ಪ್ರಕರಣ ನಕಲಿ

ಬಾಲಕಿಯೇ ಸುಳ್ಳು ಹೇಳಿಕೆ ನೀಡಿರುವುದಾಗಿ ಒಪ್ಪಿಗೆ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಶಾಲಾ ವಿದ್ಯಾರ್ಥಿನಿಯ ಅಪಹರಣ ಹಾಗೂ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ತನಿಖೆಯಲ್ಲಿ ಪ್ರಕರಣ ನಕಲಿ ಎಂದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂಗ್ರಹಿಸಲಾದ CCTV ದೃಶ್ಯಗಳನ್ನು ಪರಿಶೀಲಿಸಿದಾಗ, ದೂರಿನಲ್ಲಿ ಉಲ್ಲೇಖಿಸಲಾದಂತೆ ಯಾವುದೇ ಸಂಶಯಾಸ್ಪದ ವಾಹನಗಳು ಕಂಡುಬಂದಿಲ್ಲ. ಇದರಿಂದ ಪ್ರಕರಣದ ಬಗ್ಗೆ ಅನುಮಾನ ಬಲಪಟ್ಟಿತ್ತು.

ಇನ್ನು ವಿದ್ಯಾರ್ಥಿನಿಗೆ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ, ಗಾಯವು ಪ್ರಾಥಮಿಕವಾಗಿ ಸ್ವಯಂ ಉಂಟುಮಾಡಿಕೊಂಡ ಗಾಯ (Self Inflicted Wound) ಎಂದು ದೃಢಪಟ್ಟಿದೆ. ನಂತರ ಪೊಲೀಸರು ಬಾಲಕಿಯ ಹೇಳಿಕೆಯನ್ನು ಪುನಃ ದಾಖಲಿಸಿದ್ದು, ಈ ವೇಳೆ ಘಟನೆಯ ಬಗ್ಗೆ ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ಬಾಲಕಿಯೇ ಒಪ್ಪಿಕೊಂಡಿದ್ದಾಳೆ.

ಬಾಲಕಿ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ, ಆಕೆಯ ಹಿತದೃಷ್ಟಿಯಿಂದ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಲಾಗುತ್ತಿದೆ. ಈ ಸಂಬಂಧ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರ ಮೂಲಕ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು. ಕೌನ್ಸೆಲಿಂಗ್ ವರದಿ ಆಧರಿಸಿ ಮುಂದಿನ ಕಾನೂನು ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇದಲ್ಲದೆ, ಅಪ್ರಾಪ್ತ ಬಾಲಕಿಗೆ ವಾಹನ ಚಾಲನೆಗೆ ಅವಕಾಶ ನೀಡಿದ ವ್ಯಕ್ತಿಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದು, ಪರಿಶೀಲಿಸದ ಮಾಹಿತಿ ಅಥವಾ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ತಿಳಿಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page