February 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಂದ್ರಗ್ರಹಣದ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ

ಮಾರ್ಚ್ 3ರಂದು ಮಂಗಳವಾರ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತರ ದರ್ಶನದ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಅಂದು ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರಲಿದೆ. ಈ ಕಾರಣದಿಂದಾಗಿ ಧಾರ್ಮಿಕ ವಿಧಿವಿಧಾನಗಳ ಅನುಸಾರ ದೇವಸ್ಥಾನದ ದರ್ಶನ ವ್ಯವಸ್ಥೆಯಲ್ಲಿ ಈ ಕೆಳಗಿನಂತೆ ಬದಲಾವಣೆ ಮಾಡಲಾಗಿದೆ:

* ಮಧ್ಯಾಹ್ನದ ದರ್ಶನ: ಮಂಗಳವಾರ ಮಧ್ಯಾಹ್ನ ಒಂದೂವರೆ (1.30) ಗಂಟೆಯವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ.

* ಗ್ರಹಣದ ನಂತರದ ದರ್ಶನ: ಸಂಜೆ 6.48ಕ್ಕೆ ಗ್ರಹಣ ಮುಕ್ತಾಯವಾದ ನಂತರ ದೇವಸ್ಥಾನದ ಶುದ್ಧೀಕರಣ ಹಾಗೂ ಇತರ ವಿಶೇಷ ಪೂಜಾ ಕಾರ್ಯಗಳು ನಡೆಯಲಿವೆ. ಈ ಎಲ್ಲಾ ವಿಧಿವಿಧಾನಗಳು ಮುಗಿದ ಬಳಿಕ, ಅಂದರೆ ರಾತ್ರಿ 7.30ರ ನಂತರ ಭಕ್ತರಿಗೆ ಪುನಃ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು.

ದೂರದ ಊರುಗಳಿಂದ ಬರುವ ಭಕ್ತಾದಿಗಳು ಈ ಸಮಯದ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9945725511

You may also like

News

ದುಬೈನಲ್ಲಿ ಸಾಹಿತ್ಯದ ಕಂಪನ್ನು ಪಸರಿಸಿದ ‘ಕನ್ನಡ ಕಂಪು ಸರಣಿ-9’ ಮತ್ತು ಕೃತಿ ಲೋಕಾರ್ಪಣೆ

ದುಬೈ: ಮರುಭೂಮಿಯ ನಾಡಿನಲ್ಲಿ ಕನ್ನಡದ ಕಂಪು ಹರಡುವ ಉದ್ದೇಶದೊಂದಿಗೆ, ಕಥಾ ಬಿಂದು ಪ್ರಕಾಶನದ ವತಿಯಿಂದ ಆಯೋಜಿಸಲಾಗಿದ್ದ ‘ಕನ್ನಡ ಕಂಪು ಸರಣಿ-9’ ಕಾರ್ಯಕ್ರಮವು ಫೆಬ್ರವರಿ 18 ರಂದು ಬುಧವಾರ
News

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಸಫಾನ್ ಹುಸೇನ್ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ

ಕೊಲೆ, ಕೊಲೆಯತ್ನ ಸೇರಿದಂತೆ 31ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿ ಆರೋಪಿ ತಲೆಮರೆಸಿಕೊಳ್ಳಲು, ನಕಲಿ ದಾಖಲೆ ಸೃಷ್ಟಿಸಲು ಮತ್ತು ವಿದೇಶಕ್ಕೆ ಪರಾರಿಯಾಗಲು ಸಹಕರಿಸಿದವರ ಮೇಲೂ ತನಿಖೆ 

You cannot copy content of this page